ಜಮ್ಮು- ಕಾಶ್ಮೀರ : ಮಿನಿ ಬಸ್ ಒಂದು ಕಮರಿಗೆ ಉರುಳಿ ಬಿದ್ದಿದ್ದು, ಇದರ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಹಲವರು ಗಾಯಗೊಂಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ದೋಡಾದ ಥಾತ್ರಿ ಬಳಿ ಈ ಅಪಘಾತ ಸಂಭವಿಸಿದ್ದು, ಬಸ್ ತತ್ರಿಯಿಂದ ದೋಡಾಕ್ಕೆ ತೆರಳುತ್ತಿತ್ತೆಂದು ತಿಳಿದು ಬಂದಿದೆ.
ಈ ಬಗ್ಗೆ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಮಾಹಿತಿ ನೀಡಿದ್ದು, ಡಿ.ಸಿ. ದೊಡಾ ವಿಕಾಸ್ ಶರ್ಮಾ ಅವರೊಂದಿಗೆ ಮಾತನಾಡಿ ಗಾಯಾಳುಗಳನ್ನು ಜಿಎಂಸಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದ್ದಾರೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯ ಮುಂದುವರೆದಿದ್ದು, ಸಾವಿನ ಸಂಖ್ಯೆ ಹೆಚ್ಚಳವಾಗುವ ಸಾಧ್ಯತೆಯಿದೆ. ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.
Union Minister Dr Jitendra Singh says 8 people have lost their lives in a road accident near Thatri in Doda, Jammu & Kashmir
Just now spoke to D.C.Doda Vikas Sharma, the injured being shifted to GMC Doda;Whatever further assistance required will be provided, he adds.
(file pic) pic.twitter.com/5ZuTDOBybf
— ANI (@ANI) October 28, 2021