News Karnataka Kannada
Monday, April 29 2024
ಜಮ್ಮು-ಕಾಶ್ಮೀರ

ಜಮ್ಮು ಕಾಶ್ಮೀರ: 3 ಭಯೋತ್ಪದಕರ ಬಂಧನ, ಸ್ಪೋಟಕ ವಶ

Untitled 157
Photo Credit :

ಜಮ್ಮು-ಕಾಶ್ಮೀರ: ಲಷ್ಕರ್ ಎ ತೊಯ್ಬಾ ಸಂಘಟನೆಯ ಮೂವರು ಭಯೋತ್ಪಾದಕರನ್ನು ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ  ಬಂಧಿಸಿದ್ದು, ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವರದಿ ತಿಳಿಸಿದೆ.

ಬಂಧಿತ ಉಗ್ರರು ಬಾರಾಮುಲ್ಲಾದ ಪಠಾಣ್ ಪ್ರದೇಶದ ಸರ್ ಪಂಚ್ ಹತ್ಯೆಯ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಏಪ್ರಿಲ್ 15ರಂದು ಗೋಶ್ ಬುಘ್ ನ ಮಂಝೂರ್ ಅಹ್ಮದ್ ಬಾಂಗೂ ಅವರನ್ನು ಹತ್ಯೆಗೈದ ಪ್ರಕರಣದಲ್ಲಿ ಶಾಮೀಲಾಗಿರುವುದಾಗಿ ತನಿಖೆಯಲ್ಲಿ ತಿಳಿದು ಬಂದಿದೆ. ಬಂಧಿತ ಉಗ್ರರನ್ನು ನೂರ್ ಮೊಹಮ್ಮದ್ ಯಾಟೂ, ಮೊಹಮ್ಮದ್ ರಫೀಕ್ ಪರ್ರೆ ಮತ್ತು ಆಶೀಖ್ ಹುಸೈನ್ ಪರ್ರೆ ಎಂದು ಗುರುತಿಸಲಾಗಿದ್ದು, ಈ ಮೂವರು ಗೋಶ್ ಬುಘ್ ನಿವಾಸಿಗಳು ಎಂದು ಬಾರಾಮುಲ್ಲಾ ಎಸ್ ಎಸ್ ಪಿ ರಾಯೀಸ್ ಅಹ್ಮದ್ ಭಟ್ ತಿಳಿಸಿದ್ದಾರೆ.

ಬಂಧಿತ ಭಯೋತ್ಪಾದಕರು ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿರುವ ಲಷ್ಕರ್ ಎ ತೊಯ್ಬಾದ ಮೊಹಮ್ಮದ್ ಅಫ್ಜಲ್ ಲೋನ್ ಜತೆ ಸಂಪರ್ಕದಲ್ಲಿದ್ದರು ಎಂದು ವರದಿ ತಿಳಿಸಿದೆ. ಬಂಧಿತ ಉಗ್ರರಿಂದ ಮೂರು ಪಿಸ್ತೂಲ್, ಮೂರು ಗ್ರೆನೇಡ್ಸ್ ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು