ಜಮ್ಮು ಕಾಶ್ಮೀರ: ಕಳೆದ ೧೨ ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಲಷ್ಕರ್-ಎ-ತೊಯ್ಬಾ ಮತ್ತು ಜೈಶ್-ಎ-ಮೊಹಮ್ಮದ್ ಉಗ್ರ ಸಂಘಟನೆಯ ೫ ಭಯೋತ್ಪಾದಕರನ್ನು ಹತ್ಯೆ ಮಾಡಿದೆ ಎಂದು ತಿಳಿದುಬಂದಿದೆ.ಭದ್ರತಾ ಪಡೆಗಳಿಗೆ ಇದು ಉಗ್ರರ ವಿರುದ್ಧ ಹೋರಾಟದಲ್ಲಿ ಸಿಕ್ಕ ದೊಡ್ಡ ಯಶಸ್ಸು ಎಂದು ಕಾಶ್ಮೀರದ ಐಜಿಪಿ ಹೇಳಿದ್ದಾರೆ.
ಹತರಾದ ಭಯೋತ್ಪಾದಕರಲ್ಲಿ ಜೈಶ್-ಎ-ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಕಮಾಂಡರ್ ಹಾಗೂ ಪಾಕಿಸ್ತಾನಿ ಭಯೋತ್ಪಾದಕ ಜಾಹಿದ್ ವಾನಿ ಸೇರಿದ್ದಾನೆಂದು ವರದಿಗಳು ತಿಳಿಸಿವೆ.
ಜಾಹಿದ್ ಮಂಜೂರ್ ವಾನಿ ಜಮ್ಮು ಮತ್ತು ಕಾಶ್ಮೀರದಲ್ಲಿ ಜೈಶ್ ಭಯೋತ್ಪಾದಕರ ಪೈಕಿ ಒಬ್ಬನಾಗಿದ್ದ. ಫೆಬ್ರವರಿ ೧೪, ೨೦೧೯ ರಂದು ೪೦ಕ್ಕೂ ಹೆಚ್ಚು ಸಿಆರ್ಪಿಎಫ್ ಸಿಬ್ಬಂದಿ ಹುತಾತ್ಮರಾದ ಲೆಟ್ಪುರ ಘಟನೆಯಲ್ಲಿ ಜಾಹಿದ್ ಭಾಗಿಯಾಗಿದ್ದನು.
ಕುಲ್ಗಾಮ್ ಜಿಲ್ಲೆಯಲ್ಲಿ ಪೋಲೀಸರ ಹತ್ಯೆ ನಂತರ ಈಗ ಪುಲ್ವಾಮಾದ ನೈರಾ ಪ್ರದೇಶದಲ್ಲಿ ಭಯೋತ್ಪಾದಕರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಹೆಚ್ಚಿನ ಸಂಖ್ಯೆಯ ಸೇನೆ ಮತ್ತು ಪೊಲೀಸ್ ತಂಡ ಸ್ಥಳದಲ್ಲಿ ಉಪಸ್ಥಿತರಿದ್ದು, ಸ್ಥಳವನ್ನು ವಶಪಡಿಸಿಕೊಂಡಿವೆ.