News Karnataka Kannada
Sunday, April 28 2024
ಜಮ್ಮು-ಕಾಶ್ಮೀರ

ಜಮ್ಮು ಮತ್ತು ಕಾಶ್ಮೀರದಲ್ಲಿ ಮುಂದುವರಿದ ನಾಗರೀಕರ ಹತ್ಯೆ: ಸ್ಥಳೀಯರಲ್ಲಿ ಆತಂಕ ಛಾಯೆ

Jammu Kashmir
Photo Credit :

ಜಮ್ಮು ಮತ್ತು ಕಾಶ್ಮೀರ : ನಾಗರೀಕರ ಹತ್ಯೆ ಮುಂದುವರದಿದ್ದು, ಇಲ್ಲಿನ ಸ್ಥಿತಿ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಜೊತೆಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್​ಕೌಂಟರ್​  ಮುಂದುವರೆದಿದ್ದು, ನಿನ್ನೆ ಇಬ್ಬರು ಉಗ್ರರನ್ನುಹತ್ಯೆ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ಪರಿಸ್ಥಿತಿ ಬಿಗಡಾಯಿಸಿದ ಪರಿಣಾಮ ಕೇಂದ್ರ ಸರ್ಕಾರ ಜಮ್ಮು ಮತ್ತು ಕಾಶ್ಮೀರಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ಕಳುಹಿಸಲು ನಿರ್ಧರಿಸಿದೆ. ಮೂಲಗಳ ಪ್ರಕಾರ, ಕಣಿವೆ ರಾಜ್ಯದ ನಾಗರಿಕರಿಗೆ ಭದ್ರತೆ ನೀಡಲು ಮತ್ತು ಭಯೋತ್ಪಾದಕರನ್ನು ನಿರ್ಮೂಲನೆ ಮಾಡಲು ಇತರ ಪಡೆಗಳಿಗೆ ಸಹಾಯ ಮಾಡಲು ಜಮ್ಮು ಮತ್ತು ಕಾಶ್ಮೀರಕ್ಕೆ ಸುಮಾರು 25 ಹೆಚ್ಚು ಪಡೆಗಳ ಸೈನ್ಯವನ್ನು ಕಳುಹಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಅಧಿಕೃತ ಆದೇಶ ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ.

ಹಂತ ಹಂತವಾಗಿ ಸೇನಾ ಪಡೆ ರವಾನೆ

ಜಮ್ಮು ಮತ್ತು ಕಾಶ್ಮೀರಕ್ಕೆ ಹಂತ ಹಂತವಾಗಿ ಸಿಆರ್​ಪಿಎಫ್​ನ (CRPF) ಹೆಚ್ಚುವರಿ ಪಡೆಗಳುನ್ನು ಕಳುಹಿಸಲಾಗುವುದು. ಮೊದಲ ಹಂತದಲ್ಲಿ 10 ಪಡೆಗಳನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗುವುದು ಮುಂದಿನ ಎರಡು ಹಂತದಲ್ಲಿ ಉಳಿದ 15 ಪಡೆಗಳನ್ನು ಕಳುಹಿಸಲಾಗವುದು

ಶೀಘ್ರದಲ್ಲೇ ಅಧಿಕೃತ ಆದೇಶ

ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಉನ್ನತ ಮಟ್ಟದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ. ದೇಶದ ವಿವಿಧ ಭಾಗಗಳಲ್ಲಿ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸಿಆರ್​ಪಿಎಫ್​ ಪಡೆಗಳನ್ನು ಕರೆಸಿಕೊಂಡು ಅವರನ್ನು ಜಮ್ಮು ಮತ್ತು ಕಾಶ್ಮೀರಕ್ಕೆ ಕಳುಹಿಸಲಾಗುವುದು. ಶೀಘ್ರದಲ್ಲೇ, ಈ ಸಂಬಂಧ ಭಾರತೀಯ ಸೇನೆ ಅಧಿಕೃತ ಆದೇಶ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರದ ಮೂಲಗಳು ನ್ಯೂಸ್ 18 ಗೆ ತಿಳಿಸಿವೆ.

ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

ಈಗಾಗಲೇ ಕಣಿವೆ ರಾಜ್ಯಕ್ಕೆ ಆಗಮಿಸುವ 25ಕ್ಕೂ ಹೆಚ್ಚು ಸಿಆರ್​​ಪಿಎಫ್​ ಪಡೆಗಳಿಗೆ, ವಸತಿ, ಸಾರಿಗೆ ಇತ್ಯಾದಿಗಳ ವ್ಯವಸ್ಥೆ ಈಗಾಗಲೇ ಆರಂಭವಾಗಿದೆ. ಯಾವ ಪಡೆಗಳನ್ನು ಕರೆಸಿಕೊಳ್ಳುವುದು ಎಂಬ ಬಗ್ಗೆ ಶೀಘ್ರದಲ್ಲೇ ಮಾಹಿತಿ ನೀಡಲಾಗುವುದು. ಈ ಬಗ್ಗೆ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧರಿಸಲಾಗಿದ್ದು, ಈ ಸಂಬಂಧ ಈಗಾಗಲೇ ವ್ಯವಸ್ಥೆಗೆ ಮುಂದಾಗಲಾಗಿದೆ.

ಅ. 25- 26ಕ್ಕೆ ಕಣಿವೆ ರಾಜ್ಯಕ್ಕೆ ಅಮಿತ್​ ಶಾ

ಡಿಜಿ ಸಿಆರ್‌ಪಿಎಫ್ ಕುಲದೀಪ್ ಸಿಂಗ್ ಈಗಾಗಲೇ ಜಮ್ಮು ಮತ್ತು ಕಾಶ್ಮೀರದ ಮೇಲ್ವಿಚಾರಣಾ ಕಾರ್ಯಾಚರಣೆ ನಡೆಸಿದ್ದು, ಅತಿದೊಡ್ಡ ಅರೆಸೇನಾ ಪಡೆಯ ಇತರ ಉನ್ನತ ಅಧಿಕಾರಿಗಳೊಂದಿಗೆ ಸಂವಹನ ನಡೆಸಿದ್ದಾರೆ. ಅ. 23 ಮತ್ತು 25ಕ್ಕೆ ಕೇಂದ್ರ ಗೃಹ ಸಚಿವ ಅಮಿತ್​ ಶಾ ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅಲ್ಲಿಯವರೆಗೂ ಡಿಜಿ ಅಲ್ಲಿಯೇ ಇರಲಿದ್ದಾರೆ ಎನ್ನಲಾಗಿದೆ.

ಕಳೆದ 15ದಿನದಲ್ಲಿ 15 ಭಯೋತ್ಪಾದಕರ ಹತ್ಯೆ

ಬುಧವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್​​ಕೌಂಟರ್​ನಲ್ಲಿ ಅಪರಿಚಿತ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳು ಶೋಪಿಯಾನ್ ಜಿಲ್ಲೆಯ ಡ್ರಾಗಡ್ ಪ್ರದೇಶದಲ್ಲಿ ಉಗ್ರರು ಇರುವುದರ ಬಗ್ಗೆ ಮಾಹಿತಿ ಪಡೆದ ನಂತರ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಆರಂಭಿಸಲಾಗಿತ್ತು. ಕಳೆದ 10 ವರ್ಷಗಳಲ್ಲಿ ಭಾರತೀಯ ಸೇನೆಯ ಸುದೀರ್ಘ ಕಾರ್ಯಾಚರಣೆ ಮಾಂಧರ್ ಸೆಕ್ಟರ್‌ನಲ್ಲಿ ನಡೆಯುತ್ತಿದೆ. ಕಳೆದ ಎರಡು ವಾರಗಳಲ್ಲಿ ಒಟ್ಟು 15 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ. ಕಳೆದ 15 ದಿನಗಳಲ್ಲಿ 11 ನಾಗರಿಕರು ಸಾವನ್ನಪ್ಪಿದ್ದು, ಇವರು ಸ್ಥಳೀಯರಲ್ಲ ಎನ್ನಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು