ಶ್ರೀನಗರ: ಜಮ್ಮು-ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಂಕಿತ ಎಷ್ಕರ್ – ಇ- ತೊಯ್ಬಾ ಸಂಘಟನೆಯ ಉಗ್ರನೊಬ್ಬನನ್ನು ಬಂಧಿಸಲಾಗಿದೆ, ಪಿಸ್ತೂಲ್, ಎರಡು ಮ್ಯಾಗಜೀನ್ ಗಳು ಹಾಗೂ ಒಂಬತ್ತು ಸುತ್ತಿನ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ಹೇಳಿದ್ದಾರೆ.
ಥಾತ್ರಿಯಲ್ಲಿ ಪೊಲೀಸರು, ರಾಷ್ಟ್ರೀಯ ರೈಫಲ್ಸ್ ಮತ್ತು ಸಶಸ್ತ್ರ ಸೀಮಾ ಬಾಲ್ ಜಂಟಿ ಶೋಧ ತಂಡ ವಾಹನಗಳ ತಪಾಸಣೆ ನಡೆಸುತ್ತಿದ್ದಾಗ ಸಜನ್-ಬಜರ್ನಿ ಗ್ರಾಮದ ನಿವಾಸಿ ಆದಿಲ್ ಇಕ್ಬಾಲ್ ಭಟ್ ಎಂಬಾತನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಸ್ತುತ ಪಾಕಿಸ್ತಾನದಿಂದ ಕಾರ್ಯಾಚರಿಸುತ್ತಿರುವ ದೋಡಾದ ಭಯೋತ್ಪಾದಕ ಮೊಹಮ್ಮದ್ ಅಮೀನ್ ಅಲಿಯಾಸ್ ಮುಜಾಮಿಲ್ ಅಲಿಯಾಸ್ ಹರೂನ್ ಅಲಿಯಾಸ್ ಉಮರ್ ಇಕ್ಬಾಲ್ ಭಟ್ ನನ್ನು ನಿರ್ವಹಿಸುತ್ತಿದ್ದ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕಾನೂನಿನ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಥಾತ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.