ಜಮ್ಮು ಕಾಶ್ಮೀರ : ಕಾಶ್ಮೀರದಲ್ಲಿ ನಾಗರಿಕ ಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ರಾಷ್ಟ್ರೀಯ ತನಿಖಾ ದಳ ಮಂಗಳವಾರ ಏಕಕಾಲದಲ್ಲಿ ಜಮ್ಮು ಕಾಶ್ಮೀರ, ದೆಹಲಿ, ಉತ್ತರಪ್ರದೇಶದ 21 ಕಡೆಗಳಲ್ಲಿ ದಾಳಿ ನಡೆಸಿದೆ.
ಶಂಕಿತ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಿರುವವರ ಬಗ್ಗೆ ಮಾಹಿತಿ ಪಡೆದ ಎನ್ಐಎ ಅಧಿಕಾರಿಗಳು ಜಮ್ಮು ಮತ್ತು ಕಾಶ್ಮೀರದ 16 ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ಕಳೆದ ತಿಂಗಳು ಗುಜರಾತ್ನ ಮುಂಡ್ರಾ ಬಂದರಿನಲ್ಲಿ 3,000 ಕೆಜಿ ಹೆರಾಯಿನ್ ಡ್ರಗ್ಸ್ ವಶಕ್ಕೆ ಪಡೆದ ಬಗ್ಗೆ ಎನ್ಐಎ ದೆಹಲಿ ಮತ್ತು ಉತ್ತರ ಪ್ರದೇಶದ ಐದು ಸ್ಥಳಗಳಲ್ಲಿ ದಾಳಿ ನಡೆಸಿದೆ.
ಲಷ್ಕರ್-ಎ-ತೊಯ್ಬಾ, ಜೈಶ್-ಇ-ಮೊಹಮ್ಮದ್, ಹಿಜ್ಬುಲ್ ಮುಜಾಹಿದ್ದೀನ್ ಮತ್ತು ಅಲ್-ಬದರ್ ಉಗ್ರ ಸಂಘಟನೆಯೊಂದಿಗೆ ಸಂಪರ್ಕ ಹೊಂದಿರುವವರಿಗೆ ಈ ದಾಳಿ ಶಿಸ್ತಿನ ಪಾಠ ಕಲಿಸಿದಂತಾಗಿದೆ ಎಂದು ಎನ್ಐಎ ತಿಳಿಸಿದೆ.
ಈಗಾಗಲೇ ಕಾಶ್ಮೀರದಲ್ಲಿ ಐದು ದಿನಗಳಲ್ಲಿ ಏಳು ನಾಗರಿಕರು, ಅವರಲ್ಲಿ ನಾಲ್ವರು ಅಲ್ಪಸಂಖ್ಯಾತ ಹಿಂದೂಗಳು ಮತ್ತು ಮೂವರು ಸಿಖ್ ಸಮುದಾಯದವರು ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟಿದ್ದಾರೆ