ಪಾಂಗಾಂಗ್ ಸರೋವರದ ಬಳಿ ಮತ್ತೊಂದು ಸೇತುವೆ ನಿರ್ಮಿಸುತ್ತಿರುವ ಚೀನಾ

ಲಡಾಕ್: ಪೂರ್ವ ಲಡಾಕ್‌ನ ಪಾಂಗಾಂಗ್ ಸರೋವರದ ಬಳಿ ಚೀನಾ ಸೇನೆಯು ಮತ್ತೊಂದು ಸೇತುವೆಯನ್ನು ನಿರ್ಮಿಸುತ್ತಿರುವುದು ಉಪಗ್ರಹದ ಚಿತ್ರಗಳಿಂದ ಪತ್ತೆಯಾಗಿದೆ. ಸೇನೆ ಮತ್ತು ಶಸ್ತ್ರಸಜ್ಜಿತ ವಾಹನಗಳ ಸುಗಮ ಸಂಚಾರಕ್ಕಾಗಿ ಈ ಸೇತುವೆ ನಿರ್ಮಿಸಲಾಗುತ್ತಿದೆ ಎಂದು ತಿಳಿದು ಬಂದಿದೆ.

ಹೊಸ ಸೇತುವೆಯು ಸರೋವರದ ಉತ್ತರ ಭಾಗದಲ್ಲಿರುವ ಫಿಂಗರ್ 8 ಪ್ರದೇಶಕ್ಕೆ ನೇರವಾಗಿ ಸಂಪರ್ಕ ಕಲ್ಪಿಸುವ ಮೂಲಕ ಚೀನಾ ಭಾಗದ ಕೆಳಹಂತದ ಪ್ರದೇಶಗಳ ನಡುವಿನ ಅಂತರವನ್ನು ತಗ್ಗಿಸುತ್ತದೆ.

ಹೊಸ ಸೇತುವೆಯ ನಿರ್ಮಾಣವು ಪೂರ್ವ ಲಡಾಕ್‌ನಲ್ಲಿ ನಡೆಯುತ್ತಿರುವ ಚೀನಾ ಸೇನೆಯ ಮೂಲಸೌಕರ್ಯ ಅಭಿವೃದ್ಧಿ ಕಾರ್ಯದ ಮುಂದುವರಿದ ಭಾಗವಾಗಿದೆ. ಇದರಡಿಯಲ್ಲಿ ಒಂದು ತಿಂಗಳ ಹಿಂದೆ ಸಣ್ಣ ಸೇತುವೆಯೊಂದನ್ನು ನಿರ್ಮಿಸಲಾಗಿತ್ತು. 2020ರಲ್ಲಿ ಭಾರತ ಮತ್ತು ಚೀನಾ ಸೈನಿಕರ ನಡುವೆ ಸಂಘರ್ಷ ಏರ್ಪಟ್ಟಿದ್ದ ಸರೋವರದ ಸುತ್ತಲೂ ಸೇನಾ ಪಡೆಗಳ ತ್ವರಿತ ಚಲನೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸೇತುವೆ ಮೂಲಕ ರಸ್ತೆಯನ್ನು ನಿರ್ಮಿಸಲಾಗುತ್ತಿದೆ.

ಹೊಸ ಸೇತುವೆಯು ಜುಲೈ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆ ಇದೆ. ಈ ಸೇತುವೆಯು ಚೀನಾ ಸೇನೆಯ ಮುಖ್ಯ ಕಾರ್ಯಾಚರಣೆಯ ಪ್ರದೇಶವಾದ ಖುರ್ನಾಕ್ ಫೋರ್ಟ್ ಮತ್ತು ರುಟೊಗ್ ನಡುವಿನ ಅಂತರವನ್ನು (ಪ್ರಸ್ತುತ 180 ಕಿಮೀ) ಗಣನೀಯವಾಗಿ ತಗ್ಗಿಸಲಿದೆ ಎಂದು ಮೂಲಗಳು ತಿಳಿಸಿವೆ.

ಜನವರಿ ಮತ್ತು ಏಪ್ರಿಲ್ ನಡುವೆ ನಿರ್ಮಿಸಲಾದ ಮೊದಲ ಸೇತುವೆಯನ್ನು ದೊಡ್ಡ ಸೇತುವೆ ನಿರ್ಮಾಣಕ್ಕೆ ಕಾರ್ಮಿಕರು ಮತ್ತು ಸಾಮಗ್ರಿಗಳನ್ನು ಸಾಗಿಸಲು ಸೇವೆಯ ಕೊಂಡಿಯಾಗಿ ಬಳಸಲಾಗುತ್ತಿದೆ. ಇದು ಪೂರ್ಣಗೊಂಡ ನಂತರ ಶಸ್ತ್ರಸಜ್ಜಿತ ವಾಹನಗಳನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಚೀನಾ ಸೇನೆಯ ಇಂತಹ ಮೂಲಸೌಕರ್ಯ ಅಭಿವೃದ್ಧಿ ಕೆಲಸಗಳು ವಾಸ್ತವ ಗಡಿ ರೇಖೆ(ಎಲ್‌ಎಸಿ)ಯಿಂದ ದೂರ ಸರಿಯಲು ಚೀನಾ ಒಪ್ಪದಿರುವುದರ ಸೂಚನೆಗಳಾಗಿವೆ ಎಂದು ಭಾರತೀಯ ಸೇನಾಧಿಕಾರಿಗಳು ತಿಳಿಸಿದ್ದಾರೆ.

Ashika S

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

13 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

26 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

50 mins ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

1 hour ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

1 hour ago