ಶ್ರೀನಗರ : ಪುಲ್ವಾಮದಲ್ಲಿ ನಡೆಸಿದ್ದ ಭಯೋತ್ಪಾದಕ ದಾಳಿಯ ಸಂಚುಕೋರ ಮತ್ತು ಜೈಶ್ -ಎ-ಮೊಹಮ್ಮದ್ ಸದಸ್ಯ ಮೊಹಮ್ಮದ್ ಇಸ್ಮಲ್ ಅಲ್ವಿ ಅಲಿಯಾಸ್ ಲಂಬೂ ಅಲಿಯಾಸ್ ಅದ್ನಾನ್ ಶನಿವಾರ ನಡೆದ ಎನ್ಕಾ ಕೌಂಟರ್ ನಲ್ಲಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾನೆ. ಖಚಿತ ಸುಳಿವಿನ ಮೇರೆಗೆ ಇಂದು ಬೆಳಿಗ್ಗೆ ಪುಲ್ವಾಮದ ದಾಚಿಗಮ್ ಅರಣ್ಯ ಪ್ರದೇಶದಲ್ಲಿ ಧಾಳಿ ನಡೆಸಿದ ಭದ್ರತಾ ಪಡೆಗಳು ಎನ್ಕೌಂಟರ್ನಲ್ಲಿ ಅಲ್ವಿ ಮತ್ತು ಇನ್ನೊಬ್ಬ ಜೈಶ್ ಭಯೋತ್ಪಾದಕನನ್ನು ಹತ್ಯೆ ಮಾಡಿದ್ದಾರೆ.
ಜೈಶ್ ಮುಖ್ಯಸ್ಥ ಮಸೂದ್ ಅಜರ್ನ ಕುಟುಂಬಕ್ಕೆ ಸೇರಿದವನೆನ್ನಲಾದ ಮೃತ ಮೊಹಮ್ಮದ್ ಇಸ್ಮಲ್ ಅಲ್ವಿ, ಪುಲ್ವಾಮ ದಾಳಿಯ ಸಂಚು ರಚಿಸುವಲ್ಲಿ ಮತ್ತು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಪಾಕಿಸ್ತಾನಿ ನಾಗರಿಕನಾಗಿದ್ದ ಈತನ ಹೆಸರು ನಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ(ಎನ್ಐಎ) ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.ಇಂದು ಬೆಳಿಗ್ಗೆ ಉಗ್ರವಾದಿಗಳು ಬಚ್ಚಿಟ್ಟುಕೊಂಡಿರುವ ಸುಳಿವು ಸಿಕ್ಕ ಭದ್ರತಾ ಪಡೆ ಮತ್ತು ಕಾಶ್ಮೀರ ಪೊಲೀಸರು ಪತ್ತೆ ಕಾರ್ಯಾಚರಣೆ ಆರಂಭಿಸಿದರು. ಆಗ ಇಬ್ಬರು ಉಗ್ರವಾದಿಗಳು ಗುಂಡು ಹಾರಿಸಲು ಆರಂಭಿಸಿದಾಗ, ಎನ್ಕೌಂಟರ್ನಲ್ಲಿ ಸಾವಪ್ಪಿದರು. ಮೃತಪಟ್ಟವರಲ್ಲಿ ಒಬ್ಬ ಇಸ್ಮಲ್ ಅಲ್ವಿಯಾಗಿ ಗುರುತಿಸಲ್ಪಟ್ಟಿದ್ದರೆ, ಮತ್ತೊಬ್ಬನ ಗುರುತು ಇನ್ನೂ ಪತ್ತೆ ಹಚ್ಚಲಾಗುತ್ತಿದೆ ಎನ್ನಲಾಗಿದೆ.
ದಶಕಗಳಲ್ಲೇ ಅತ್ಯಂತ ಬರ್ಬರವಾದ ದಾಳಿಯಾಗಿದ್ದ ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ, 40 ಸೈನಿಕರು ಮೃತಪಟ್ಟಿದ್ದರು. ಜೈಶ್ ಸಂಘಟನೆಯ ಸೂಯಿಸೈಡ್ ಬಾಂಬರ್ಗಳು 2019 ಫೆಬ್ರವರಿ 14 ರಂದು ಈ ದಾಳಿ ನಡೆಸಿದ್ದರು. ಇದಾದ ನಂತರ ಪಾಕಿಸ್ತಾನದ ಬಾಲಾಕೋಟ್ನಲ್ಲಿದ್ದ ಜೈಶ್ ಸಂಘಟನೆಯ ಶಿಬಿರಗಳ ಮೇಲೆ ಭಾರತ ಏರ್ಸ್ಟ್ರೈಕ್ ನಡೆಸಿತ್ತು ಎನ್ನಲಾಗಿದೆ.
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…
ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ. ಹೌದು. .…
ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್ಸಿಬಿ vs ಸಿಎಸ್ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…
ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.