ಜಮ್ಮು-ಕಾಶ್ಮೀರ

ಪುಲ್ವಾಮಾ ಧಾಳಿಯ ಸಂಚುಕೋರ ಇಸ್ಮತ್‌ ಅಲ್ವಿ ಪೋಲೀಸ್‌ ಗುಂಡಿಗೆ ಬಲಿ

 

ಶ್ರೀನಗರ :  ಪುಲ್ವಾಮದಲ್ಲಿ  ನಡೆಸಿದ್ದ  ಭಯೋತ್ಪಾದಕ  ದಾಳಿಯ ಸಂಚುಕೋರ  ಮತ್ತು   ಜೈಶ್‌ ​-ಎ-ಮೊಹಮ್ಮದ್ ಸದಸ್ಯ ಮೊಹಮ್ಮದ್ ಇಸ್ಮಲ್ ಅಲ್ವಿ ಅಲಿಯಾಸ್ ಲಂಬೂ ಅಲಿಯಾಸ್​ ಅದ್ನಾನ್​  ಶನಿವಾರ  ನಡೆದ ಎನ್ಕಾ‌ ಕೌಂಟರ್ ನಲ್ಲಿ   ಭದ್ರತಾ ಪಡೆಗಳ ಗುಂಡಿಗೆ  ಬಲಿಯಾಗಿದ್ದಾನೆ. ಖಚಿತ ಸುಳಿವಿನ ಮೇರೆಗೆ  ಇಂದು ಬೆಳಿಗ್ಗೆ ಪುಲ್ವಾಮದ ದಾಚಿಗಮ್​ ಅರಣ್ಯ ಪ್ರದೇಶದಲ್ಲಿ ಧಾಳಿ ನಡೆಸಿದ ಭದ್ರತಾ ಪಡೆಗಳು   ಎನ್​ಕೌಂಟರ್​ನಲ್ಲಿ ಅಲ್ವಿ ಮತ್ತು ಇನ್ನೊಬ್ಬ ಜೈಶ್​  ಭಯೋತ್ಪಾದಕನನ್ನು   ಹತ್ಯೆ ಮಾಡಿದ್ದಾರೆ.
ಜೈಶ್​ ಮುಖ್ಯಸ್ಥ ಮಸೂದ್​ ಅಜರ್​ನ ಕುಟುಂಬಕ್ಕೆ ಸೇರಿದವನೆನ್ನಲಾದ ಮೃತ ಮೊಹಮ್ಮದ್​ ಇಸ್ಮಲ್ ಅಲ್ವಿ, ಪುಲ್ವಾಮ ದಾಳಿಯ ಸಂಚು ರಚಿಸುವಲ್ಲಿ ಮತ್ತು ಆಯೋಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ. ಪಾಕಿಸ್ತಾನಿ ನಾಗರಿಕನಾಗಿದ್ದ ಈತನ ಹೆಸರು ನಾಷನಲ್ ಇನ್ವೆಸ್ಟಿಗೇಷನ್ ಏಜೆನ್ಸಿ(ಎನ್​ಐಎ) ಸಲ್ಲಿಸಿರುವ ಚಾರ್ಜ್​ಶೀಟ್​ನಲ್ಲಿದೆ ಎಂದು ಕಾಶ್ಮೀರ ಪೊಲೀಸರು ತಿಳಿಸಿದ್ದಾರೆ.ಇಂದು ಬೆಳಿಗ್ಗೆ ಉಗ್ರವಾದಿಗಳು ಬಚ್ಚಿಟ್ಟುಕೊಂಡಿರುವ ಸುಳಿವು ಸಿಕ್ಕ ಭದ್ರತಾ ಪಡೆ ಮತ್ತು ಕಾಶ್ಮೀರ ಪೊಲೀಸರು ಪತ್ತೆ ಕಾರ್ಯಾಚರಣೆ ಆರಂಭಿಸಿದರು. ಆಗ ಇಬ್ಬರು ಉಗ್ರವಾದಿಗಳು ಗುಂಡು ಹಾರಿಸಲು ಆರಂಭಿಸಿದಾಗ, ಎನ್​ಕೌಂಟರ್​ನಲ್ಲಿ ಸಾವಪ್ಪಿದರು. ಮೃತಪಟ್ಟವರಲ್ಲಿ ಒಬ್ಬ ಇಸ್ಮಲ್​ ಅಲ್ವಿಯಾಗಿ ಗುರುತಿಸಲ್ಪಟ್ಟಿದ್ದರೆ, ಮತ್ತೊಬ್ಬನ ಗುರುತು ಇನ್ನೂ ಪತ್ತೆ ಹಚ್ಚಲಾಗುತ್ತಿದೆ ಎನ್ನಲಾಗಿದೆ.
ದಶಕಗಳಲ್ಲೇ ಅತ್ಯಂತ ಬರ್ಬರವಾದ ದಾಳಿಯಾಗಿದ್ದ ಪುಲ್ವಾಮ ಭಯೋತ್ಪಾದಕ ದಾಳಿಯಲ್ಲಿ, 40 ಸೈನಿಕರು ಮೃತಪಟ್ಟಿದ್ದರು. ಜೈಶ್​ ಸಂಘಟನೆಯ ಸೂಯಿಸೈಡ್​ ಬಾಂಬರ್​​​ಗಳು 2019 ಫೆಬ್ರವರಿ 14 ರಂದು​ ಈ ದಾಳಿ ನಡೆಸಿದ್ದರು. ಇದಾದ ನಂತರ ಪಾಕಿಸ್ತಾನದ ಬಾಲಾಕೋಟ್​ನಲ್ಲಿದ್ದ ಜೈಶ್​ ಸಂಘಟನೆಯ ಶಿಬಿರಗಳ ಮೇಲೆ ಭಾರತ ಏರ್​ಸ್ಟ್ರೈಕ್ ನಡೆಸಿತ್ತು ಎನ್ನಲಾಗಿದೆ.

Indresh KC

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

1 hour ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

2 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

2 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

3 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

3 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

3 hours ago