ಜಮ್ಮು ಕಾಶ್ಮೀರ:ಮಾತಾ ವೈಷ್ಣೋದೇವಿ ದೇಗುಲ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ.ಆದರೂ ದೇಗುಲ ಮಂಡಳಿ ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.ಸದ್ಯಕ್ಕೆ ಯಾವುದೇ ಹಾನಿ ಸಂಭವಿಸಿಲ್ಲ ಮತ್ತು ಯಾತ್ರೆ ಸುಗಮವಾಗಿ ಸಾಗಿದೆ.ಅಲ್ಲದೆ, ಕೇಂದ್ರ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ‘ನಾವು ಶ್ರೀ ಮಾತಾ ವೈಷ್ಣೋದೇವಿ ಟ್ರಸ್ಟ್ ಆಡಳಿತದೊಂದಿಗೆ ಸಂಪರ್ಕದಲ್ಲಿದ್ದೇವೆ’ ಎಂದು ಟ್ವೀಟ್ ಮಾಡಿದ್ದಾರೆ.
ತ್ರಿಕೂಟ ಬೆಟ್ಟಗಳಲ್ಲಿರುವ ಪವಿತ್ರ ಕ್ಷೇತ್ರಕ್ಕೆ ಯಾತ್ರೆಯು ಯಾವುದೇ ಪರಿಣಾಮ ಬೀರಲಿಲ್ಲ ಎಂದು ಶ್ರೀ ಮಾತಾ ವೈಷ್ಣೋ ದೇವಿ ಪುಣ್ಯಕ್ಷೇತ್ರ ಮಂಡಳಿ ತಿಳಿಸಿದೆ.
ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ