News Karnataka Kannada
Friday, May 03 2024
ಜಮ್ಮು-ಕಾಶ್ಮೀರ

ಮೇಘಸ್ಫೋಟ: ಒಂದೇ ಕುಟುಂಬದ ನಾಲ್ವರು ಸಾವು

Cloud Burst 12092021
Photo Credit :

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಅಲೆಮಾರಿ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಮೊಹಮ್ಮದ್ ತಾರಿಕ್ ಖಾರಿ (8), ಶಹನಾಜ ಬೇಗಂ (30), ನಾಜಿಯಾ ಅಕ್ತರ್ (14) ಮತ್ತು ಅರಿಫ್ ಹುಸೇನ್ ಖಾರಿ (5) ಎಂಬುವವರು ಮೃತಪಟ್ಟಿದ್ದು, ಇವರೆಲ್ಲರೂ ಜಮ್ಮು ಪ್ರದೇಶದ ರಾಜೌರಿಯ ಕಲ್ಸಿಯಾನ್ ನೌಶೇರಾ ಪ್ರದೇಶದವರು.

ಉತ್ತರ ಕಾಶ್ಮೀರ ಜಿಲ್ಲೆಯ ಸೋಪೋರ್ ಪ್ರದೇಶದ ಹಮಾಮ್ ಮಾರ್ಕೂಟ್‌ನಲ್ಲಿರುವ ಡಂಗಿವಾಚಾದ ಮೇಲಿನ ಭಾಗದಲ್ಲಿ ಶನಿವಾರ ರಾತ್ರಿ ಮೇಘಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೊಲೀಸರು ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ತಂಡಗಳು ಸ್ಥಳಕ್ಕೆ ಧಾವಿಸಿದ್ದು, ನಾಲ್ವರ ಶವಗಳನ್ನು ಹೊರತೆಗೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು