ಜಮ್ಮು ಮತ್ತು ಕಾಶ್ಮೀರ: ರಜೌರಿ ಜಿಲ್ಲೆಯ ಧರ್ಮಸಾಲ್ನ ಬಾಜಿಮಾಲ್ ಪ್ರದೇಶದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಎನ್ಕೌಂಟರ್ ನಲ್ಲಿ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಪ್ರಮುಖ ಭಯೋತ್ಪಾದಕ ಖಾರಿ ಎಂಬಾತನನ್ನು ಹತ್ಯೆ ಮಾಡಿದೆ.
ಈತ ಪಾಕಿಸ್ತಾನಿ ಪ್ರಜೆಯಾಗಿದ್ದು, ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆಯ ಉನ್ನತ ಶ್ರೇಣಿಯ ಭಯೋತ್ಪಾದಕ ಎಂದು ತಿಳಿದುಬಂದಿದೆ. ಕಳೆದ ವರ್ಷದಿಂದ ರಜೌರಿ-ಪೂಂಚ್ನಲ್ಲಿ ಸಕ್ರಿಯನಾಗಿದ್ದ. ಡ್ಯಾಂಗ್ರಿ ಮತ್ತು ಕಂಡಿ ದಾಳಿಯ ಮಾಸ್ಟರ್ ಮೈಂಡ್ ಆಗಿದ್ದ ಎನ್ನಲಾಗಿದೆ.
ಗುಹೆಗಳಲ್ಲಿ ಕಾರ್ಯಾಚರಣೆ ನಡೆಸುವುದು, ತರಬೇತಿ ಪಡೆದ ಸ್ನೈಪರ್, ಐಇಡಿಯಲ್ಲಿ ಪರಿಣಿತನಾಗಿದ್ದ ಈತನನ್ನು ರಜೌರಿ ಹಾಗೂ ಪೂಂಚ್ ನಲ್ಲಿ ಉಗ್ರ ಚಟುವಟಿಕೆಗಳ ಪುನರಾರಂಭಿಸಲುವ ಸಲುವಾಗಿಯೇ ಉಗ್ರ ಸಂಘಟನೆಗಳು ರವಾನಿಸಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.