ಜಮ್ಮು ಕಾಶ್ಮೀರ : ಶ್ರೀನಗರದಲ್ಲಿ ಭಯೋತ್ಪಾದಕರ ಹಟ್ಟಹಾಸ ಮುಂದುವರೆದಿದ್ದು, ಮತ್ತೋರ್ವ ನಾಗರಿಕನ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ.
ಹೌದು, ಹಳೆಯ ಶ್ರೀನಗರದ ಬೊಹ್ರಿ ಕಾದಲ್ ಪ್ರದೇಶದಲ್ಲಿ ಭಯೋತ್ಪಾದಕರು ನಾಗರಿಕನ ಮೇಲೆ ಗುಂಡು ಹಾರಿಸಿದ್ದು, ಆತನನ್ನ ಆಸ್ಪತ್ರೆಗೆ ದಾಖಲಾಗಿದೆ.
ಸಧ್ಯ ಆತನ ಸ್ಥಿತಿ ಗಂಭೀರವಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಾಹಿತಿ ನೀಡಿದ್ದಾರೆ.
ಅಂದ್ಹಾಗೆ, ಇದಕ್ಕೂ ಮುನ್ನ ಭಾನುವಾರ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಟಮಾಲೂ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ಬಲಿಯಾದ ಪೊಲೀಸ್ ಒಬ್ಬರು, ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
‘ರಾತ್ರಿ 8 ಗಂಟೆ ಸುಮಾರಿಗೆ ಭಯೋತ್ಪಾದಕರು ಜೆಕೆಪಿ ಕಾನ್ ಸ್ಟೆಬಲ್ ತೌಸಿಫ್ ಅಹ್ಮದ್ ಅವರ ಮೇಲೆ ಬಟಮಾಲೂನ ಎಸ್ ಡಿ ಕಾಲೋನಿಯಲ್ಲಿರುವ ಅವರ ನಿವಾಸದ ಬಳಿ ಗುಂಡು ಹಾರಿಸಿದ್ದಾರೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ನು ಪೋಲೀಸ್ ಅಧಿಕಾರಿ ತೀವ್ರವಾಗಿ ಗಾಯಗೊಂಡಿದ್ದು, ಎಸ್ ಎಂಎಚ್ ಎಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದ್ರು, ಅವ್ರು ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ ಎಂದರು.