News Karnataka Kannada
Sunday, May 05 2024
ಜಮ್ಮು-ಕಾಶ್ಮೀರ

ಶ್ರೀನಗರದ ಕಾದಲ್ ಮಾರುಕಟ್ಟೆಯಲ್ಲಿ ಗ್ರೆನೇಡ್ ದಾಳಿ: 11 ಜನರಿಗೆ ಗಂಭೀರ ಗಾಯ

Terrorists open fire on army vehicle
Photo Credit :

ಶ್ರೀನಗರ : ಶ್ರೀನಗರದ ಲಾಲ್ ಚೌಕ್ ನ ಅಮೀರಾ ಕಾದಲ್ ಮಾರುಕಟ್ಟೆಯಲ್ಲಿ ಭಯೋತ್ಪಾದಕರು ಗ್ರೆನೇಡ್ ದಾಳಿ  ನಡೆಸಿದ್ದು, ಪೊಲೀಸ್ ಸೇರಿದಂತೆ ಕನಿಷ್ಠ ಹನ್ನೊಂದು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಾರ್ಯನಿರತ ಅಮಿರಾ ಕಾದಲ್ ಮಾರುಕಟ್ಟೆಯಲ್ಲಿ ಉಗ್ರರು ಗ್ರೆನೇಡ್ ಎಸೆದಿದ್ದಾರೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಘಟನೆಯಲ್ಲಿ ಒಬ್ಬ ಪೋಲೀಸ್ ಸೇರಿದಂತೆ ಹನ್ನೊಂದು ಜನರಿಗೆ ಗಾಯಗಳಾಗಿವೆ ಎಂದು ಮೂಲಗಳು ವರದಿ ಮಾಡಿದೆ.

ಇನ್ನು ಗಾಯಗೊಂಡವರನ್ನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿ ಹೇಳಿದರು. ಏತನ್ಮಧ್ಯೆ ದಾಳಿಕೋರರನ್ನ ಬಂಧನಕ್ಕಾಗಿ ಪ್ರದೇಶವನ್ನು ಸೇನೆ ಸುತ್ತುವರಿದಿದೆ. ಈ ಕುರಿತು ಮತ್ತಷ್ಟು ಮಾಹಿತಿ ಲಭ್ಯವಾಗಬೇಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು