ಶ್ರೀನಗರ: ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಗಂಭೀರವಾಗಿ ಗಾಯಗೊಂಡಿದ್ದ 6 ಪೊಲೀಸ್ ಸಿಬ್ಬಂದಿಗಳನ್ನು ತಕ್ಷಣ ಸುರನ್ ಕೋಟೆಯ ಉಪ-ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಪೊಲೀಸ್ ಅಧೀಕ್ಷಕರ ಬೆಂಗಾವಲು ವಾಹನ ಸ್ಕಿಡ್ ಆಗಿ ನದಿಗೆ ಬಿದ್ದು ಇಬ್ಬರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿರುವ ಘಟನೆ ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗಳು ಗಾಯಗೊಂಡಿದ್ದಾರೆ.ಪೂಂಚ್ ನ ಬಫ್ಲಿಯಾಜ್ ಪ್ರದೇಶದಲ್ಲಿರುವ ಡ್ರೋಗ್ಜಿಯನ್ ಎಂಬ ಗ್ರಾಮದಲ್ಲಿ ಈ ದುರ್ಘಟನೆ ಸಂಭವಿಸಿದೆ.
ವಿಭಾಗೀಯ ಪೊಲೀಸ್ ಆಯುಕ್ತ ರಾಘವ ಲಾಗರ್ ಜಮ್ಮುವಿಗೆ ಭೇಟಿ ನೀಡಿದ್ದರು. ಅವರಿಗೆ ಭದ್ರತೆ ನೀಡಲು ಪೂಂಚ್ ಎಸ್ ಎಸ್ ಪಿ ವಿನೋದ್ ಕುಮಾರ್ ನೇತೃತ್ವದ ತಂಡ ಭೇಟಿ ನೀಡಿತ್ತು. ಮೊಘಲ್ ರಸ್ತೆಯಲ್ಲಿ ಬೆಂಗಾವಲು ವಾಹನ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.
ಬಸ್ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್ಪ್ರೆಸ್ ವೇಯಲ್ಲಿ…
ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್ಸಿಎಲ್ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…