News Karnataka Kannada
Monday, April 29 2024
ಜಮ್ಮು-ಕಾಶ್ಮೀರ

ಶ್ರೀನಗರ: ಆಸ್ಪತ್ರೆಯಲ್ಲಿ ಭಾರೀ ಅಗ್ನಿ ದುರಂತ,ರೋಗಿಗಳ ಜೀವ ಉಳಿಸಿದ ಸ್ಥಳೀಯರು

Fire
Photo Credit :

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿನ  ಆಸ್ಪತ್ರೆಯಲ್ಲಿ ಭಾರೀ ಅಗ್ನಿ ಅನಾಹುತ ಸಂಭವಿಸಿದ್ದು, ಸ್ಥಳೀಯರ ಸಮಯಪ್ರಜ್ಞೆಯಿಂದ ಶೀಘ್ರ ರಕ್ಷಣಾ ಕಾರ್ಯಾಚರಣೆ ನಡೆಸಿದ ಪರಿಣಾಮ ನೂರಾರು ರೋಗಿಗಳ ಜೀವ ಉಳಿಸಿದ ಘಟನೆ ಶನಿವಾರ ನಡೆದಿರುವುದಾಗಿ ವರದಿ ತಿಳಿಸಿದೆ.

ಬೆಂಕಿ ಎಲ್ಲೆಡೆ ಹೊತ್ತಿಕೊಳ್ಳುತ್ತಿದ್ದಂತೆಯೇ ಆಸ್ಪತ್ರೆಯ ಸುತ್ತಮುತ್ತಲಿನ ಯುವಕರು ಕೂಡಲೇ ಸಮಯಪ್ರಜ್ಞೆಯಿಂದ ರಕ್ಷಣೆಯಲ್ಲಿ ತೊಡಗಿ, ರೋಗಿಗಳನ್ನು ಆಸ್ಪತ್ರೆಯ ಸಿಬಂದಿಗಳ ನೆರವಿನಿಂದ ಸುರಕ್ಷಿತವಾಗಿ ಸ್ಥಳಾಂತರಿಸಿರುವುದಾಗಿ ವರದಿ ತಿಳಿಸಿದೆ.

ಕಾಶ್ಮೀರದ ಪ್ರಮುಖ ಆಸ್ಪತ್ರೆಯಾದ ಬೋನ್ ಆಯಂಡ್ ಜಾಯಿಂಟ್ ಆಸ್ಪತ್ರೆಯ ನಾಲ್ಕು ಅಂತಸ್ತಿನ ಕಟ್ಟಡದ ಮೇಲಿನ ಎರಡು ಅಂತಸ್ತುಗಳಲ್ಲಿ ಭಾರೀ ಅಗ್ನಿ ದುರಂತ ಸಂಭವಿಸಿತ್ತು.

ಈ ಸಂದರ್ಭದಲ್ಲಿ ಆಸ್ಪತ್ರೆಯ ವಾರ್ಡ್ ಗಳಲ್ಲಿ 110 ರೋಗಿಗಳಿದ್ದರು. ಇವರಿಗೆಲ್ಲಾ ಸುಮಾರು ಒಂದು ಗಂಟೆಯ ಹಿಂದೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು ಎಂದು ವರದಿ ವಿವರಿಸಿದೆ.

ಇದರ ಹೊರತಾಗಿಯೂ 22 ರೋಗಿಗಳನ್ನು ತುರ್ತುನಿಗಾ ಘಟಕದಲ್ಲಿದ್ದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿರುವುದಾಗಿ ವರದಿ ಹೇಳಿದೆ.

ನಂತರ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಎಸ್ ಡಿಆರ್ ಎಫ್ ತಂಡ ಆಗಮಿಸಿದ್ದರು. ಸ್ಥಳೀಯರು ಹಾಗೂ ಇವರೆಲ್ಲರ ಜಂಟಿ ಶ್ರಮದಿಂದ ನೂರಾರು ರೋಗಿಗಳ ಜೀವ ರಕ್ಷಿಸಿದಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು