ಉಧಂಪುರ್ : ಜಮ್ಮು ಮತ್ತು ಕಾಶ್ಮೀರದ ಉಧಂಪುರ್ ಜಿಲ್ಲೆಯ ಶಿವ ಗರ್ ಧಾರ್ನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ.
ಮಂಜು ಮುಸುಕಿದ ವಾತಾವರಣದಿಂದ ಹೆಲಿಕಾಪ್ಟರ್ ಅಪಘಾತವಾಗಿದೆ ಎನ್ನಲಾಗಿದೆ. ಪೊಲೀಸರಿಗೆ ಈಗಾಗಲೇ ಮಾಹಿತಿ ದೊರೆತಿದ್ದು, ರಕ್ಷಣಾ ಕಾರ್ಯಾಚರಣೆಗೆ ತಂಡಗಳನ್ನು ಕಳುಹಿಸಲಾಗಿದೆ.
ಮಂಜಿನ ವಾತಾವರಣದಿಂದ ಹೆಲಿಕಾಪ್ಟರ್ ಪತನಗೊಂಡಿದೆ. ಅಪಘಾತಕ್ಕೀಡಾಗಿದೆಯೋ ಅಥವಾ ನೆಲಕ್ಕಪ್ಪಳಿಸಿದೆಯೋ ಮಾಹಿತಿ ದೊರೆತಿಲ್ಲ. ಪೈಲಟ್ ಮತ್ತು ಸಹ ಪೈಲಟ್ ಗಾಯಗೊಂಡಿದ್ದಾರೆ ಎಂದು ಡಿಐಜಿ ಉಧಂಪುರ್ ಸುಲೇಮಾನ್ ಚೌಧರಿ ಹೇಳಿದ್ದಾರೆ.