ವೈಷ್ಣೋದೇವಿ ದೇಗುಲಕ್ಕೆ ತೆರಳುತ್ತಿದ್ದ ಬಸ್‌ ಅಪಘಾತ: 10 ಮಂದಿ ಸಾವು

ಜಮ್ಮು: ಸೇತುವೆ ಮೇಲಿಂದ ಆಳವಾದ ಕಂದರಕ್ಕೆ ಖಾಸಗಿ ಬಸ್ ಬಿದ್ದ ಪರಿಣಾಮ 10 ಪ್ರಯಾಣಿಕರು ದುರ್ಮರಣ ಹೊಂದಿರುವ ಘಟನೆ ಕೇಂದ್ರಾಡಳಿತ ಪ್ರದೇಶ ಜಮ್ಮುವಿನ ಬಳಿ ಇಂದು ಮುಂಜಾನೆ ನಡೆದಿದೆ.

ಅಮೃತಸರದಿಂದ ಕತ್ರಾಕ್ಕೆ ತೆರಳುತ್ತಿದ್ದ ಬಸ್ ಆಳವಾದ ಕಂದರಕ್ಕೆ ಬಿದ್ದು, ಈ ದುರಂತ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಜಮ್ಮು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಬಸ್ ಅಮೃತಸರದಿಂದ ಕತ್ರಾದಲ್ಲಿರುವ ವೈಷ್ಣೋದೇವಿ ದೇಗುಲಕ್ಕೆ ತೆರಳುತ್ತಿದ್ದಾಗ ದುರಂತ ಸಂಭವಿಸಿದೆ. ಕತ್ರಾದಿಂದ ಸುಮಾರು 15 ಕಿಮೀ ದೂರದಲ್ಲಿರುವ ಜಜ್ಜರ್ ಕೋಟ್ಲಿ ಬಳಿ ಆಳವಾದ ಕಂದರಕ್ಕೆ ಬಸ್ ಉರುಳಿ ಬಿದ್ದಿರುವುದಾಗಿ ಜಮ್ಮು ಡೆಪ್ಯುಟಿ ಕಮಿಷನರ್ ಅವ್ನಿ ಲವಾಸಾ  ತಿಳಿಸಿದ್ದಾರೆ.

ಘಟನೆಯಲ್ಲಿ 10 ಮಂದಿ ಸಾವನ್ನಪ್ಪಿದ್ದು, 55 ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ. ಎಲ್ಲರನ್ನೂ ತೆರವುಗೊಳಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳದಲ್ಲಿದ್ದು, ರಕ್ಷಣಾ ಕಾರ್ಯಾಚರಣೆ ಬಹುತೇಕ ಮುಗಿದಿದೆ. ಬಸ್‌ನಲ್ಲಿ ನಿಗದಿತ ಮಿತಿಗಿಂತ ಹೆಚ್ಚಿನ ಪ್ರಯಾಣಿಕರು ಪ್ರಯಾಣಿಸುತ್ತಿದುದ್ದೇ ಅಪಘಾತಕ್ಕೆ ಕಾರಣವಾಗಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಜಮ್ಮು ಎಸ್ ಎಸ್ ಪಿ ಚಂದನ್‌ ಕೊಹ್ಲಿ ತಿಳಿಸಿದ್ದಾರೆ.

Gayathri SG

Recent Posts

ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನಿನಲ್ಲಿ ಬಿಡುಗಡೆಗೆ ಸಿದ್ಧ

ಪರಂವಃ ಸ್ಟುಡಿಯೋಸ್ ನಿರ್ಮಾಣದ, ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ ಅಭಿನಯದ `777 ಚಾರ್ಲಿ’ ಚಿತ್ರ ಇದೀಗ ಜಪಾನೀಸ್ ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ.…

23 mins ago

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ, ಕೇಳುವುದು ಇಲ್ಲ : ಸಿಎಂ

ರೈತರಿಗಾಗಿ ಹಣ ಕೇಳಿದ್ದು, ಗ್ಯಾರಂಟಿಗಾಗಿ ಹಣ ಕೇಳಿಲ್ಲ ಮತ್ತು ಕೇಳುವುದು ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕರ ವಿರುದ್ಧ…

56 mins ago

ತಂದೆ ಕಿರುಕುಳಕ್ಕೆ ಬೇಸತ್ತು ತಾಯಿ ಆತ್ಮಹತ್ಯೆಗೆ ಯತ್ನ: ಪ್ರಾಣ ಉಳಿಸಿದ 7 ವರ್ಷದ ಬಾಲಕಿ

ಅಪ್ಪನ ದೌರ್ಜನ್ಯಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸುತ್ತಿದ್ದ ತಾಯಿಯನ್ನು ಏಳು ವರ್ಷದ ಬಾಲಕಿಯೊಬ್ಬಳು ಕಾಪಾಡಿದ ಘಟನೆ ಗುಜರಾತ್​ನ ಅಹಮದಾಬಾದ್​ನಲ್ಲಿ ನಡೆದಿದೆ.

1 hour ago

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ದುಷ್ಕರ್ಮಿಗಳ ಗುಂಡಿಗೆ ಬಲಿ

ಇರಾಕ್‌ನ ಟಿಕ್‌ ಟಾಕ್‌ ಸ್ಟಾರ್‌ ಓಂ ಫಹಾದ್‌ ರನ್ನು ಬಾಗ್ದಾದ್‌ನ ಜೊಯೌನಾ ಜಿಲ್ಲೆಯಲ್ಲಿ ತಡ ರಾತ್ರಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾಗಿದ್ದಾರೆ.  

2 hours ago

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ…

2 hours ago

ಮೋದಿ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಉಸ್ಮಾನ್‌ ಘನಿ ಪೊಲೀಸರ ವಶಕ್ಕೆ

ಪ್ರಧಾನಿ ಮೋದಿಯವರ ಹೇಳಿಕೆಯನ್ನು ಟೀಕಿಸಿ ಪಕ್ಷದಿಂದ ಉಚ್ಛಾಟನೆಗೊಂಡಿದ್ದ ಬಿಕಾನೇರ್‌ನ ಬಿಜೆಪಿ ಅಲ್ಪಸಂಖ್ಯಾತ ಮೋರ್ಛಾದ ಜಿಲ್ಲಾಧ್ಯಕ್ಷ ಉಸ್ಮಾನ್‌ ಘನಿಯನ್ನು ಪೊಲೀಸರು ಬಂಧಿಸಿದ್ದಾರೆ.

2 hours ago