ಜಮ್ಮು-ಕಾಶ್ಮೀರ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಎರಡು ದಿನಗಳ ಜಮ್ಮು ಪ್ರವಾಸದಲ್ಲಿ, ಖ್ಯಾತ ಯಾತ್ರಾ ತಾಣ ವೈಷ್ಣೋದೇವಿ ದೇಗುಲಕ್ಕೆ ಭೇಟಿ ನೀಡಿದ್ದು, ಸುಮಾರು 14 ಕಿ.ಮೀ. ದೂರವನ್ನು ಕಾಲ್ನಡಿಗೆಯಲ್ಲೇ ಸಾಗಿ ವೈಷ್ಣೋದೇವಿ ದರ್ಶನ ಪಡೆದಿದ್ದಾರೆ. ಜಮ್ಮುವಿನ ರಿಯಾಸಿ ಜಿಲ್ಲೆಯ ತ್ರಿಕುಟಾ ಬೆಟ್ಟದಲ್ಲಿರುವ ಹೆಸರಾಂತ ಯಾತ್ರಾ ಸ್ಥಳ ವೈಷ್ಣೋದೇವಿ ಗುಹೆಗೆ ರಾಹುಲ್ ಗಾಂಧಿ ಕಾಲ್ನಡಿಗೆಯಲ್ಲಿ ಸಾಗಿ, ಶುಕ್ರವಾರ ಬೆಳಗ್ಗೆ ದೇವಿಯ ದರ್ಶನ ಪಡೆದಿದ್ದಾರೆ. ಜಮ್ಮುವಿನ ಕಟ್ರಾದಿಂದ ಇಲ್ಲಿಗೆ ಸುಮಾರು 14 ಕಿ.ಮೀ ದೂರ.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ವೈಷ್ಣೋದೇವಿಗೆ ಪ್ರಾರ್ಥನೆ ಸಲ್ಲಿಸಲು ಬಂದಿದ್ದೇನೆ. ಈ ವೇಳೆ ಯಾವುದೇ ರಾಜಕೀಯ ವಿಷಯಗಳನ್ನು ಮಾತನಾಡಲು ಇಷ್ಟಪಡುವುದಿಲ್ಲ’ ಎಂದಿದ್ದಾರೆ. ವೈಷ್ಣೋದೇವಿ ಯಾತ್ರೆ ವೇಳೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಮತ್ತು ಭದ್ರತಾ ಸಿಬ್ಬಂದಿಗಳು ರಾಹುಲ್ ಗಾಂಧಿ ಗೆ ಸಾಥ್ ನೀಡಿದ್ದರು