ಶ್ರೀನಗರ: ಅಮರನಾಥ ದೇಗುಲದ ಬಳಿ ಜು. 8ರಂದು ಉಂಟಾಗಿದ್ದ ಪ್ರವಾಹಕ್ಕೆ ಸಂಬಂಧಿಸಿದಂತೆ ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಸ್ಥಗಿತಗೊಳಿಸಲಾಗಿದೆ. ಒಟ್ಟು 15 ಮಂದಿ ಸಾವನ್ನಪ್ಪಿದ್ದಾರೆ ಮತ್ತು ಯಾರೂ ನಾಪತ್ತೆಯಾಗಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಹೇಳಿದ್ದಾರೆ.
ಘಟನೆಯಲ್ಲಿ ಒಟ್ಟು 55 ಮಂದಿ ಗಾಯಗೊಂಡಿದ್ದಾರೆ ಮತ್ತು ಈ ಪೈಕಿ ಇಬ್ಬರು ಇನ್ನೂ ಆಸ್ಪತ್ರೆಯಲ್ಲಿದ್ದಾರೆ. ಉಳಿದವರನ್ನು ಡಿಸ್ಚಾರ್ಜ್ ಮಾಡಲಾಗಿದೆ.
ಕೇಂದ್ರಾಡಳಿತ ಪ್ರದೇಶ ನೀಡಿದ್ದ ಸಹಾಯವಾಣಿಗಳಿಗೆ 200ಕ್ಕೂ ಅಧಿಕ ಕರೆಗಳು ಬಂದಿವೆ. ಕೆಲವು ಯಾತ್ರಿಕರ ವಿವರ ಪರಿಶೀಲಿಸಲಾಗಿದೆ ಮತ್ತು ಕೆಲವರ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿದ್ದುದರಿಂದ ಅವರ ಇರವು ಪತ್ತೆ ಹಚ್ಚಲು ಕಷ್ಟವಾಗಿತ್ತು ಎಂದಿದ್ದಾರೆ.