News Karnataka Kannada
Sunday, May 05 2024
ಜಮ್ಮು-ಕಾಶ್ಮೀರ

ಅಮರನಾಥದಲ್ಲಿ ಮೇಘ ಸ್ಫೋಟ: 15 ಮಂದಿ ಸಾವು, 40ಕ್ಕೂ ಅಧಿಕ ಮಂದಿಗೆ ಗಾಯ

15 killed, over 40 injured in cloudburst at Amarnath shrine
Photo Credit : IANS

ಶ್ರೀನಗರ: ದಕ್ಷಿಣ ಕಾಶ್ಮೀರದ ಹಿಮಾಲಯದ ತಪ್ಪಲಿನ ಯಾತ್ರಾಸ್ಥಳ ಅಮರನಾಥದಲ್ಲಿ ಶುಕ್ರವಾರ ಸಂಜೆ 5.30ರ ಹೊತ್ತಿಗೆ ಮೇಘ ಸ್ಫೋಟ ಉಂಟಾಗಿದೆ. ಇದರಿಂದಾಗಿ ಕನಿಷ್ಠ 15 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಅಧಿಕ ಮಂದಿ ಗಾಯಾಳುಗಳಾಗಿದ್ದಾರೆ.
ಗುಡ್ಡಗಾಡು ಪ್ರದೇಶದ ಮೇಲ್ಭಾಗದಲ್ಲಿ ಭಾರೀ ಮಳೆಯಾದ ಪರಿಣಾಮ ಒಮ್ಮೆಲೆ ನೀರು ಹರಿದಿದೆ.

ಅಮರನಾಥ ಯಾತ್ರಿಗಳಿದ್ದ ಟೆಂಟ್‌ಗಳು ಹಾಗೂ ಅವರಿಗೆ ಅಡುಗೆ ಮಾಡ ಲಾಗುತ್ತಿದ್ದ ಸ್ಥಳಕ್ಕೂ ನೀರು ನುಗ್ಗಿದೆ. ಮಳೆ ಮುಂದುವರಿದಿರುವ ಹಿನ್ನೆಲೆ ಅಮರ ನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಹವಾಮಾನ ಅನುಕೂಲ ಮಾಡಿಕೊಟ್ಟ ಅನಂತರವೇ ಯಾತ್ರೆ ಪುನರಾರಂಭ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣ ತಂಡ, ರಾಜ್ಯದ ವಿಪತ್ತು ನಿರ್ವಹಣ ತಂಡಗಳು ರಕ್ಷಣ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಗಾಯಾಳುಗಳನ್ನು ಏರ್‌ಲಿಫ್ಟ್ ಮಾಡಿ, ಆಸ್ಪತ್ರೆಗೆ ಕಳುಹಿಸಿಕೊಡಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ಕೊಟ್ಟಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು