ಚಂಡೀಗಢ: ಜಮ್ಮು-ಕಾಶ್ಮೀರದ ಅನಂತನಾಗ್ನಲ್ಲಿ ನಡೆದ ಎನ್ಕೌಂಟರ್ ವೇಳೆ ಭಾರತೀಯ ಸೇನೆಯ ಕರ್ನಲ್ ಮನ್ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋನೌಕ್ ಹಾಗೂ ಜಮ್ಮು-ಕಾಶ್ಮೀರ ಪೊಲೀಸ್ ಇಲಾಖೆಯ ಡಿವೈಎಸ್ಪಿ ಹುಮಾಯೂನ್ ಭಟ್ ಅವರು ಹುತಾತ್ಮರಾಗಿದ್ದಾರೆ.
ಅವರ ಹುಟ್ಟೂರುಗಳಲ್ಲಿ ಸರ್ಕಾರಿ ಗೌರವ ಹಾಗೂ ಸಾವಿರಾರು ಜನರ ಕಣ್ಣೀರಿನ ಮಧ್ಯೆ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಅದರಲ್ಲೂ, ಪಂಜಾಬ್ನ ಮಲ್ಲನ್ಪುರ ಗರೀಬ್ದಾಸ್ನಲ್ಲಿ ಕರ್ನಲ್ ಮನ್ಪ್ರೀತ್ ಸಿಂಗ್ ಅಂತ್ಯಸಂಸ್ಕಾರದ ವೇಳೆ ಅವರ ಆರು ವರ್ಷದ ಮಗನು ತಂದೆಗೆ ಕೊನೆಯ ಬಾರಿ ಸೇನೆ ಬಟ್ಟೆ ಧರಿಸಿ ಸೆಲ್ಯೂಟ್ ಮಾಡಿರುವ ಭಾವನಾತ್ಮಕ ಕ್ಷಣಗಳ ವಿಡಿಯೊ ವೈರಲ್ ಆಗಿದೆ.
ಕರ್ನಲ್ ಮನ್ಪ್ರೀತ್ ಸಿಂಗ್ ಅವರ ಪಾರ್ಥಿವ ಶರೀರವು ಮಲ್ಲನ್ಪುರ ಗರೀಬ್ದಾಸ್ಗೆ ಆಗಮಿಸುತ್ತಲೇ ಯೋಧನ ಪತ್ನಿ, ಕುಟುಂಬಸ್ಥರು ಸೇರಿ ಇಡೀ ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.