ಕುಪ್ವಾರ: ಇಂದಿನಿಂದ ಅಮಿತ್ ಶಾ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಲಿದ್ದು, ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಆದರೆ ಅಮಿತ್ ಶಾ ಜಮ್ಮು-ಕಾಶ್ಮೀರಕ್ಕೆ ಕಾಲಿಡುವ ಕೆಲ ಗಂಟೆಗಳ ಮೊದಲೇ ನಾಲ್ವರು ಭಯೋತ್ಪಾದಕರ ಎನ್ಕೌಂಟರ್ ಮಾಡಲಾಗಿದೆ ಎಂದು ವರದಿಯಾಗಿದೆ. 4 ಭಯೋತ್ಪಾದಕರು ಭಾರತದ ಒಳಬರಲು ಪ್ರಯತ್ನ ಮಾಡಿದ್ದಾರೆ. ಇದನ್ನು ಭಾರತೀಯ ಭದ್ರತಾ ಪಡೆಗಳು ವಿಫಲಗೊಳಿಸಿದ್ದು, ಜಮ್ಮು-ಕಾಶ್ಮೀರದ ಕುಪ್ವಾರದಲ್ಲಿ 4 ಭಯೋತ್ಪಾದಕರು ಎನ್ಕೌಂಟರ್ ಮಾಡಿದ್ದಾರೆ.
ವಜ್ರ ವಿಭಾಗದ ಜನರಲ್ ಆಫೀಸರ್ ಕಮಾಂಡಿಂಗ್, ಮೇಜರ್ ಜನರಲ್ ಗಿರೀಶ್ ಕಾಲಿಯಾ ಕಾರ್ಯಾಚರಣೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರುರು, ಭಾರತ ಮತ್ತು ಪಾಕಿಸ್ತಾನದ ನಡುವೆ ಕದನ ವಿರಾಮ ಒಪ್ಪಂದವಿದೆ. ಆದರೆ ಇತ್ತೀಚಿನ ದಿನಗಳಲ್ಲಿ, ಈ ಒಪ್ಪಂದವನ್ನು ಅವರು ಮುರಿಯುತ್ತಿದ್ದಾರೆ ಎಂದು ಹೇಳಿದ್ದಾರೆ. ಜೊತೆಗೆ ಅಮೀತ್ ಶಾ ಹಿನ್ನೆಲೆಯಲ್ಲಿ ಭಾರೀ ಭದ್ರತೆಯನ್ನು ನೀಡಲಾಗಿದೆ ಎಂದು ತಿಳಿಸಿದರು