ಜಮ್ಮು ಮತ್ತು ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸ್ಫೋಟ ಸಂಭವಿಸಿದೆ. ಪೂಂಛ್ನ ದೇವಸ್ಥಾನವೊಂದರ ಸಮೀಪ ಸುರನ್ಕೋಟೆ ಬಸ್ ನಿಲ್ದಾಣದ ಬಳಿ ಸ್ಫೋಟ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ. ಯಾವುದೇ ಸಾವುನೋವುಗಳು ವರದಿಯಾಗಿಲ್ಲ.
ಸ್ಫೋಟದ ನಂತರ, ಬಸ್ ನಿಲ್ದಾಣದ ಸಮೀಪವಿರುವ ದೇವಾಲಯದ ಗೋಡೆಗಳ ಮೇಲೆ ಚೂರುಗಳು ಕಂಡುಬಂದಿವೆ. ಸ್ಫೋಟಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಫೋರೆನ್ಸಿಕ್ ತಂಡವನ್ನು ಕರೆಸಲಾಗಿದೆ ಮತ್ತು ಸ್ಫೋಟದ ಸ್ಥಳದ ಸುತ್ತ ಭದ್ರತೆಯನ್ನು ಹೆಚ್ಚಿಸಲಾಗಿದೆ. ಇನ್ನು ಈ ಸ್ಫೋಟದ ಹಿಂದೆ ಯಾರ ಕೈವಾಡವಿದೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಇದು ಬಹುಶಃ ಗ್ರೆನೇಡ್ ದಾಳಿಯಾಗಿರಬಹುದು ಎಂದು ಮೂಲಗಳು ತಿಳಿಸಿವೆ.
ಭದ್ರತಾ ಏಜೆನ್ಸಿಗಳು ತನಿಖೆ ಆರಂಭಿಸಿವೆ. ಸ್ಫೋಟ ಸಂಭವಿಸಿದ ಪ್ರದೇಶದ ಸಲೈನ್ ಗ್ರಾಮದಲ್ಲಿ ಮೂವರನ್ನು ಬಂಧಿಸಲಾಗಿದೆ. ಬಂಧಿತರಿಂದ ಎರಡು ಪಿಸ್ತೂಲ್ಗಳು, ನಾಲ್ಕು ಮ್ಯಾಗಜೀನ್ಗಳು, ಆರು ಮೊಬೈಲ್ ಫೋನ್ಗಳು ಮತ್ತು 2.5 ಲಕ್ಷ ರೂಪಾಯಿ ಮೌಲ್ಯದ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.