ಜಮ್ಮು: ಇಲ್ಲಿನ ಸಾಂಬಾ ಜಿಲ್ಲೆಯ ರಾಮಗಢ ಸೆಕ್ಟರ್ನ ಅಂತರರಾಷ್ಟ್ರೀಯ ಗಡಿಯಲ್ಲಿ ಇಂದು(ನ.09) ಮುಂಜಾನೆ ಪಾಕ್ ರೇಂಜರ್ಸ್ನ ಅಪ್ರಚೋದಿತ ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ ಹುತಾತ್ಮರಾಗಿದ್ದಾರೆ.
ಗಡಿ ಔಟ್ಪೋಸ್ಟ್ಗಳನ್ನು ಗುರಿಯಾಗಿಸಿಕೊಂಡು ಈ ದಾಳಿ ನಡೆದಿದೆ. 24 ದಿನಗಳ ಅಂತರದಲ್ಲಿ ನಡೆದ ಮೂರನೇ ಕದನ ವಿರಾಮ ಉಲ್ಲಂಘನೆಯ ದೃಷ್ಟಾಂತ ಇದಾಗಿದೆ.
ಗಾಯಗೊಂಡಿರುವ ಅಧಿಕಾರಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಜಮ್ಮುವಿನಲ್ಲಿರುವ ಜಿಎಂಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಅವರು ಮೃತಪಟ್ಟಿದ್ದಾರೆ. ಪಾಕಿಸ್ತಾನ ರೇಂಜರ್ಸ್ನ ಈ ಅಪ್ರಚೋದತ ದಾಳಿಗೆ ಬಿಎಸ್ಎಫ್ ಯೋಧರು ಸೂಕ್ತ ರೀತಿಯಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಬಿಎಸ್ಎಫ್ ಪ್ರಕಟಣೆಯಲ್ಲಿ ತಿಳಿಸಿದೆ.
‘ಮಧ್ಯರಾತ್ರಿ 12.20ರ ವೇಳೆ ದಾಳಿ ಪ್ರಾರಂಭವಾಯಿತು. ಬಳಿಕ ಷೆಲ್ ದಾಳಿ ಕೂಡ ನಡೆಯಿತು. ಗುಂಡಿನ ದಾಳಿ ಹಾಗೂ ಷೆಲ್ಲಿಂಗ್ನಿಂದಾಗಿ ಗಡಿ ಜನರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ’ ಎಂದು ಸ್ಥಳೀಯ ಜೆರ್ಡಾ ನಿವಾಸಿ ಮೋಹನ್ ಕುಮಾರ್ ಭಟ್ಟಿ ತಿಳಿಸಿದ್ದಾರೆ.
ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯ ಮನೆಯಲ್ಲಿ ಅತಿಥಿ ಉಪನ್ಯಾಸಕಿಯೂಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್ ಕೇಸ್ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ…
ಭಾರೀ ಕೋಲಾಹಲ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪೊಲೀಸರೆಂದು ಹೇಳಿಕೊಂಡು ಬಂದಿರುವ…
ಎಳನೀರು ನೂರು ರೋಗಗಳಿಗೆ ಒಂದೇ ಔಷಧಿ ಎಂಬುದು ಬಹಳಷ್ಟು ಮಂದಿಗೆ ತಿಳಿದಿಲ್ಲ. ಎಳನೀರಿನಲ್ಲಿ ಅಧಿಕ ವಿಟಮಿನ್ ಹಾಗೂ ಖನಿಜವನ್ನು ಒಳಗೊಂಡಿದೆ.…
ಇಂದು ತಮಿಳುನಾಡಿನ ಶಿವಕಾಶಿ ಸಮೀಪದ ಸೆಂಗಮಲಪಟ್ಟಿಯಲ್ಲಿರುವ ಪಟಾಕಿ ಘಟಕದಲ್ಲಿ ಸ್ಫೋಟ ಸಂಭವಿಸಿದ್ದು, ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ.
ರಾಜ್ಯಾದ್ಯಂತ ಇಂದು ಬೆಳಗ್ಗೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟಗೊಂಡಿದೆ. ಆದರೆ, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಮಂಡ್ಯ ವಿದ್ಯಾರ್ಥಿ ಲಿಖಿತ್ ಫೇಲ್ ಆಗಿದ್ದಕ್ಕೆ ಮನನೊಂದು…