ಜಮ್ಮು-ಕಾಶ್ಮೀರ: ಮುಂಬರುವ 2024ರ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸೆಪ್ಟೆಂಬರ್ 7ರಿಂದ ʼಭಾರತ್ ಜೋಡೋʼ ಯಾತ್ರೆಯನ್ನು ನಡೆಸಲು ಕಾಂಗ್ರೆಸ್ ಸಜ್ಜಾಗಿದೆ. ಈ ಕುರಿತು ಅಧಿಕೃತವಾಗಿ ಪಕ್ಷವು ಘೋಷಿಸಿದೆ.
ಮೂಲಗಳ ಪ್ರಕಾರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಯಾತ್ರೆ ಆರಂಭವಾಗಲಿದ್ದು, ಕಾಶ್ಮೀರದಲ್ಲಿ ಮುಕ್ತಾಯವಾಗಲಿದೆ. ಯಾತ್ರೆಯು 12 ರಾಜ್ಯಗಳಲ್ಲಿ 3,500 ಕಿಲೋಮೀಟರ್ ದೂರವನ್ನು ಕ್ರಮಿಸಲಿದೆ. ಯಾತ್ರೆಯು ಸುಮಾರು 150 ದಿನಗಳ ಕಾಲ ನಡೆಯಲಿದೆ.
ರಾಹುಲ್ ಗಾಂಧಿ ಸೇರಿದಂತೆ ಎಲ್ಲ ಕಾಂಗ್ರೆಸ್ ನಾಯಕರು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಎಐಸಿಸಿ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ತಿಳಿಸಿರುವುದಾಗಿ ಮೂಲಗಳು ವರದಿ ಮಾಡಿವೆ.
ಈ ವರ್ಷದ ಕಾಂಗ್ರೆಸ್ನ ಚಿಂತನಾ ಶಿಬಿರದ ನವ ಸಂಕಲ್ಪದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಭಾರತ್ ಜೋಡೋ ಯಾತ್ರೆಯನ್ನು ಘೋಷಿಸಿದ್ದರು. ದಿಗ್ವಿಜಯ ಸಿಂಗ್ ಅವರು ಭಾರತ್ ಜೋಡೋ ಯಾತ್ರೆಯ ಸಂಘಟನಾ ಸಮಿತಿಯ ಉಸ್ತುವಾರಿ ವಹಿಸಿದ್ದಾರೆ.
“ಭಾರತದ ‘ವೈವಿಧ್ಯತೆಯಲ್ಲಿ ಏಕತೆ’ ಮತ್ತು ‘ಸರ್ವ ಧರ್ಮ ಸಮಭಾವ’ವನ್ನು ನಂಬುವ ಭಾರತದ ಎಲ್ಲ ಜನರನ್ನು ‘ಜೋಡೋ ಇಂಡಿಯಾ’ ನಡೆಸಲು ಭಾರತದ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಜಿಜಿ ಪಾರಿಖ್ ಜಿ ಕರೆ ನೀಡಿದ್ದಾರೆ ಎಂದು ದಿಗ್ವಿಜಯ್ ಸಿಂಗ್ ಸರಣಿ ಟ್ವೀಟ್ಗಳ ಮೂಲಕ ತಿಳಿಸಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ನ್ನು ಚುನಾವಣಾ ಅಧಿಕಾರಿಗಳು ತಪಾಸಣೆ ನಡೆಸಿದ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ.
ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…
ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…
ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್ ಜಿಲ್ಲಾ ಪೊಲೀಸರು…
2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್…