ಶ್ರೀನಗರ: ಪುಲ್ವಾಮದಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್ಪಿಎಫ್) ಸಬ್ಇನ್ಸ್ಪೆಕ್ಟರ್ ವಿನೋದ್ ಕುಮಾರ್ ಭಾನುವಾರ ಮೃತಪಟ್ಟಿದ್ದಾರೆ.
ದಕ್ಷಿಣ ಕಾಶ್ಮೀರದ ಗಂಗೂ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಪೊಲೀಸ್ ಹಾಗೂ ಸಿಆರ್ಪಿಎಫ್ ತಂಡದ ಮೇಲೆ ಮಧ್ಯಾಹ್ನ 2.20ರ ವೇಳೆಗೆ ಉಗ್ರರು ದಾಳಿ ಮಾಡಲಾರಂಭಿಸಿದರು.
ಗಾಯಗೊಂಡ ವಿನೋದ್ ಕುಮಾರ್ ಅವರನ್ನು ತಕ್ಷಣವೇ ಪುಲ್ವಾಮದಲ್ಲಿರುವ ಆಸ್ಪತ್ರೆಯೊಂದಕ್ಕೆ ದಾಖಲು ಮಾಡಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.