ಶ್ರೀನಗರ: ಜಮ್ಮು-ಕಾಶ್ಮೀರದ ಗಡಿಯಲ್ಲಿ ಪಾಕ್ ಸೇನೆಯಿಂದ ಫೈರಿಂಗ್ ನಡೆದಿದೆ. ಈ ಗುಂಡಿನ ದಾಳಿಯಲ್ಲಿ ಓರ್ವ ಬಿಎಸ್ಎಫ್ ಯೋಧ, ನಾಲ್ವರು ನಾಗರಿಕರಿಗೆ ಗಾಯವಾಗಿದೆ. ಜಮ್ಮು- ಕಾಶ್ಮೀರ ಗಡಿ ನಿಯಂತ್ರಣ ರೇಖೆಯ ಬಳಿ ಪಾಕಿಸ್ತಾನದ ಸೇನೆ ಗುಂಡಿನ ದಾಳಿ ನಡೆಸಿದೆ. ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಸೇನೆಯಿಂದ ಗುಂಡಿನ ದಾಳಿ ನಡೆದಿದೆ.
ಗುರುವಾರ ರಾತ್ರಿ 8 ಗಂಟೆ ಸುಮಾರಿಗೆ ಗಡಿ ಭದ್ರತಾ ಪಡೆ ಭಾರತೀಯ ಪೋಸ್ಟ್ಗಳ ಮೇಲೆ ಪಾಕಿಸ್ತಾನಿ ಸೈನಿಕರು ಅಪ್ರಚೋದಿತ ಗುಂಡಿನ ದಾಳಿ ನಡೆಸಿದ್ದು, ಭಾರತೀಯ ಪಡೆಗಳು ಕೂಡ ಅದಕ್ಕೆ ಪ್ರತಿದಾಳಿ ನಡೆಸಿವೆ ಎಂದು ಬಿಎಸ್ಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕುಪ್ವಾರಾ ಜಿಲ್ಲೆಯ ಎಲ್ಒಸಿಯಾದ್ಯಂತ ನುಸುಳಲು ಯತ್ನಿಸಿದ ಐವರು ಎಲ್ಇಟಿ ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಕುಪ್ವಾರದ ಮಚಿಲ್ ಸೆಕ್ಟರ್ನಲ್ಲಿ ನಿಯಂತ್ರಣ ರೇಖೆಯಲ್ಲಿ ಪೊಲೀಸರು ಮತ್ತು ಸೇನೆ ನಡೆಸಿದ ಜಂಟಿ ಕಾರ್ಯಾಚರಣೆಯ ಕೆಲವೇ ಗಂಟೆಗಳ ನಂತರ ಅರ್ನಿಯಾ ಸೆಕ್ಟರ್ನಲ್ಲಿ ಕದನ ವಿರಾಮ ಉಲ್ಲಂಘನೆಯಾಗಿರುವುದಾಗಿ ಮಾಹಿತಿ ತಿಳಿದು ಬಂದಿದೆ.