ಶ್ರೀನಗರ: ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ತೀವ್ರ ಚಳಿಯ ವಾತಾವರಣವಿದೆ. ಅದೇ ರೀತಿ ಜಮ್ಮು ಕಾಶ್ಮೀರದಲ್ಲಿ ಚಳಿಗಾಲದ ತೀವ್ರತೆ ಹೆಚ್ಚಾಗಿದ್ದು, ಸ್ಥಳೀಯವಾಗಿ ಕರೆಯಲ್ಪಡುವ ‘ಚಿಲ್ಲಾ ಇ ಕಲನ್’ (ತೀವ್ರ ಚಳಿ) ಆರಂಭವಾಗಿದೆ.
ಜಗದ್ವಿಖ್ಯಾತ ಅಮರನಾಥ ಯಾತ್ರೆಯ ಆರಂಭ ಸ್ಥಾನ ಪಹಲ್ಗಾಂನಲ್ಲಿ ಅತಿ ಕನಿಷ್ಠ ಉಷ್ಣಾಂಶ ಮೈನಸ್ 3.9 ಡಿ.ಸೆ.ನಷ್ಟು ದಾಖಲಾಗಿದೆ. ಕೊರೆಯುತ್ತಿರುವ ಚಳಿಗಾಲಕ್ಕೆ ಶ್ರೀನಗರದ ಪ್ರಸಿದ್ಧ ದಾಲ್ ಸರೋವರ ಹೆಪ್ಪುಗಟ್ಟಿದೆ.
ಅಲ್ಲದೆ ತಮಿಳುನಾಡಿನ ಪ್ರಸಿದ್ಧ ಗಿರಿಧಾಮ ಉದಕಮಂಡಲ (ಊಟಿ)ಯಲ್ಲಿ ಭಾನುವಾರ ಬಿಳಿಯ ಹೊದಿಕೆ ಹೊದ್ದುಕೊಂಡಿತ್ತು.
ಊಟಿ ನಗರದಲ್ಲಿ ಭಾನುವಾರ ಉಷ್ಣಾಂಶ 1 ಡಿಗ್ರಿ ಸೆಲ್ಷಿಯಸ್ಗೆ ಇಳಿದಿದ್ದರೆ, ಅಲ್ಲಿದ ಕೇವಲ 3 ಕಿ.ಮೀ ದೂರದ ತಲಕುಂಡ ಪ್ರದೇಶದಲ್ಲಿ ಉಷ್ಣಾಂಶ ಶೂನ್ಯಕ್ಕೆ ತಲುಪಿತ್ತು.