ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿಕ ಪಾಕ್ ಕಡೆಯಿಂದ ಸ್ನೈಪರ್ ಗುಂಡಿನ ದಾಳಿ ನಡೆದಿದ್ದು, ಭಾರತೀಯ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ತಡರಾತ್ರಿ ಕೇರಾನ್ ಸೆಕ್ಟರ್ ನಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಸಂಜೆ ಕೆರಾನ್ ಸೆಕ್ಟರ್ನಲ್ಲಿರುವ ಭಾರತೀಯ ಸೇನಾ ಪೋಸ್ಟ್ನ ಮೇಲೆ ಪಾಕಿಸ್ತಾನ ಸೇನೆಯು ಸ್ನೈಪರ್ ಗುಂಡು ಹಾರಿಸಿತು. ಈ ಘಟನೆಯಲ್ಲಿ ಯೋಧ ಸೌರವ್ ಕುಮಾರ್ ಗಾಯಗೊಂಡಿದ್ದಾರೆ. ಚಿಕಿತ್ಸೆಗಾಗಿ ಶ್ರೀನಗರದಲ್ಲಿರುವ ಸೇನೆಯ ಬೇಸ್ ಆಸ್ಪತ್ರೆಗೆ ಅವರನ್ನು ವಿಮಾನದಲ್ಲಿ ಸಾಗಿಸಲಾಗಿದೆ. ಸೈನಿಕ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.