ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವಿನ ಗುಂಡಿನ ಕಾಳಗ ಮುಂದುವರೆದಿದೆ. ಭಾರತೀಯ ಸೇನೆಯ ಒಬ್ಬ ಯೋಧ ಇನ್ನೂ ನಾಪತ್ತೆಯಾಗಿದ್ದು, ಹುಡುಕಾಟ ಮುಂದುವರೆದಿದೆ.
ಅನಂತ್ನಾಗ್ ಜಿಲ್ಲೆಯ ಗುಡೋಲೆ ದಟ್ಟ ಅರಣ್ಯ ಪ್ರದೇಶದಲ್ಲಿ ಲಷ್ಕರ್-ಏ-ತೋಯ್ಬಾ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಅಡಗಿದ್ದಾರೆ ಎಂದು ಸೇನಾ ಅಧಿಕಾರುಗಳು ಮಾಹಿತಿ ನೀಡಿದ್ದಾರೆ. ಭದ್ರತಾ ಪಡೆಗಳು ಮಂಗಳವಾರದಿಂದ ಅವರ ಜೊತೆ ಗುಂಡಿನ ಚಕಮಕಿ ನಡೆಸುತ್ತಿದೆ.
ಇನ್ನು ಎನ್ಕೌಂಟರ್ನಲ್ಲಿಇಂದು(ಸೆ.15) ಓರ್ವ ಯೋಧ ಹುತಾತ್ಮರಾಗಿದ್ದಾರೆ. ಯೋಧರ ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಭಾರತೀಯ ಸೇನೆ ಪ್ರದೇಶವನ್ನು ಸುತ್ತುವರಿದಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಬುಧವಾರ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಕರ್ನಲ್ ಮನ್ಪ್ರೀತ್ ಸಿಂಗ್, ಮೇಜರ್ ಆಶಿಶ್ ದೋನಕ್ ಮತ್ತು ಡಿವೈಎಸ್ಪಿ ಹುಮಾಯಾನ್ ಭಟ್ ಹುತಾತ್ಮರಾಗಿದ್ದರು.