News Karnataka Kannada
Thursday, May 02 2024
ಜಮ್ಮು-ಕಾಶ್ಮೀರ

ಉಗ್ರ ಕ್ರಿಮಿಗಳಿಗೆ ಜಿಪಿಎಸ್‌ ‘ಬಳೆʼ ಅಳವಡಿಕೆ

Installation of GPS "bangles" of terrorist insects
Photo Credit : News Kannada

ಶ್ರೀನಗರ: ಉಗ್ರ ಕೃತ್ಯ ಶಂಕೆ ಮೇಲೆ ಸೆರೆಯಾಗಿ ಬಳಿಕ ಜಾಮೀನು ಪಡೆದುಕೊಂಡು ಜೈಲಿನಿಂದ ಹೊರಬರುವವರನ್ನು ನಿಗಾ ಇಡುವುದು ಬಹುಕಷ್ಟ. ಈ ಕಾರಣಕ್ಕಾಗಿ ಶಂಕಿತ ಉಗ್ರರ ಮೇಲೆ ನಿಗಾ ಇಡಲು ಅವರ ಕಾಲಿಗೆ ಜಿಪಿಎಸ್ ಆಧಾರಿತ ಬಳೆಯನ್ನುಜಮ್ಮು ಕಾಶ್ಮೀರ ಪೊಲೀಸರು ಪರಿಚಯಿಸಿದ್ದಾರೆ.

ಹಲವು ಉಗ್ರ ಸಂಘಟನೆಯ ಜೊತೆ ಸಂಪರ್ಕ ಹೊಂದಿದ್ದ ಗುಲಾಂ ಮೊಹಮ್ಮದ್‌ ಭಟ್‌ ಮೇಲೆ ದೇಶದ್ರೋಹದ ಪ್ರಕರಣ ದಾಖಲಾಗಿತ್ತು. ಈತನ ಜಾಮೀನು ಅರ್ಜಿಯನ್ನು ಆಲಿಸಿದ ಜಮ್ಮು ಕಾಶ್ಮೀರದಲ್ಲಿರುವ ರಾಷ್ಟ್ರೀಯ ತನಿಖಾ ದಳದ ನ್ಯಾಯಾಲಯ ಪೊಲೀಸರಿಗೆ ಜಿಪಿಎಸ್ ಆಧಾರಿತ ಸಾಧನ ಅಳವಡಿಸಲು ಸೂಚಿಸಿ ಜಾಮೀನು ಮಂಜೂರು ಮಾಡಿತು.

ಜಿಪಿಎಸ್‌ ಟ್ರ್ಯಾಕರ್ ಆಂಕ್ಲೆಟ್ ವ್ಯಕ್ತಿಯ ಪಾದದ ಸುತ್ತಲೂ ಧರಿಸಬಹುದಾದ ಸಾಧನವಾಗಿದ್ದು, ಮೇಲ್ವಿಚಾರಣೆ ಮಾಡಲು ಮತ್ತು ಅವರ ಚಲನೆಯನ್ನು ಟ್ರ್ಯಾಕ್ ಮಾಡುತ್ತದೆ. ಜಾಮೀನು, ಪೆರೋಲ್ ಮತ್ತು ಗೃಹಬಂಧನದಲ್ಲಿರುವ ಆರೋಪಿಗಳ ಚಲನವಲನವನ್ನು ಪತ್ತೆಹಚ್ಚಲು ಈ ಸಾಧನ ಬಳಸಲಾಗುತ್ತದೆ. ವಿದೇಶಗಳಲ್ಲಿ ಈ ಸಾಧನಗಳನ್ನು ಬಳಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು