ಜಮ್ಮುಕಾಶ್ಮೀರ: ಉಗ್ರರ ವಿರುದ್ದದ ಕಾರ್ಯಾಚರಣೆಯಲ್ಲಿ ಹುತಾತ್ಮನಾದ ಸೇನಾ ಶ್ವಾನ ಆಕ್ಸೆಲ್

ಜಮ್ಮುಕಾಶ್ಮೀರ:  ಬಾರಾಮುಲ್ಲಾದಲ್ಲಿ ನಡೆದ ಉಗ್ರರ ವಿರುದ್ದದ ಕಾರ್ಯಾಚರಣೆಯಲ್ಲಿ ಸೇನಾ ಶ್ವಾನ ಆಕ್ಸೆಲ್ ಹುತಾತ್ಮನಾಗಿದೆ. ಶನಿವಾರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ವಾಣಿಗಂಬಳದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಂದರ್ಭ ಭಯೋತ್ಪಾದಕರು ಮೂರು ಬಾರಿ ಗುಂಡು ಹಾರಿಸಿದ್ದು, ಈ ವೇಳೆ ಸೇನಾ ಶ್ವಾನ ‘ಆಕ್ಸೆಲ್’ ಪ್ರಾಣಾರ್ಪಣೆ ಮಾಡಿದೆ.

ಅಲೆಕ್ಸ್, ಕೇವಲ ಎರಡು ವರ್ಷ ವಯಸ್ಸಿನ ತಿಳಿ ಕಂದು ಬಣ್ಣದ ಬೆಲ್ಜಿಯನ್ ಮಾಲಿನೊಯಿಸ್ ತಳಿಯ ಶ್ವಾನವಾಗಿದ್ದು, 26ನೇ ಆರ್ಮಿ ಶ್ವಾನ ಘಟಕದ ಭಾಗವಾಗಿದ್ದರು. ಅಲೆಕ್ಸ್‌ನನ್ನು 29 ರಾಷ್ಟ್ರೀಯ ರೈಫಲ್ಸ್ ಘಟಕದೊಂದಿಗೆ 10ನೇ ಸೆಕ್ಟರ್ ಆರ್‌ಆರ್ ಪ್ರತಿ ಬಂಡಾಯ ಪಡೆಗಳ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. ಆಲೆಕ್ಸ್ ಹಾಗೂ ಮತ್ತೊಂದು ಆರ್ಮಿ ಡಾಗ್ ‘ಬಾಲಾಜಿ’ ಈ ಕಾರ್ಯಾಚರಣೆಯ ಭಾಗವಾಗಿದ್ದರು.

ಆರಂಭದಲ್ಲಿ, ಕಟ್ಟಡದ ಒಳಗೆ ಬಾಲಾಜಿಯನ್ನು ಕಳುಹಿಸಲಾಯಿತು. ಬಾಲಾಜಿ ಒಳಗಿನ ಕಾರಿಡಾರ್ ಅನ್ನು ಸ್ಯಾನಿಟೈಸ್ ಮಾಡಿತ್ತು. ಬಾಲಾಜಿಯನ್ನು ಹಿಂಬಾಲಿಸಿದ ಆಕ್ಸೆಲ್ ಮೊದಲ ಕೊಠಡಿಯೊಳಗೆ ಹೋಗಿ ತೆರವುಗೊಳಿಸಿತು. ಆದರೆ, ಆತ ಎರಡನೇ ಕೊಠಡಿಗೆ ಪ್ರವೇಶಿಸಿದಾಗ ಉಗ್ರರು ಆತನ ಮೇಲೆ ಗುಂಡು ಹಾರಿಸಿದ್ದು, ಆಕ್ಸೆಲ್ ಹುತಾತ್ಮನಾಗಿದೆ.

 

ಇದಾದ ಬಳಿಕವೂ ಸೈನಿಕರು ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ನಡೆದಿದ್ದು,ಭಯೋತ್ಪಾದಕ ಅಖ್ತರ್ ಹುಸೇನ್ ಭಟ್ ಎನ್‌ಕೌಂಟರ್‌ನಲ್ಲಿ ಕೊಲ್ಲಲ್ಪಟ್ಟಿದ್ದಾನೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಸೇನಾ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

5 ಗಂಟೆಗಳ ಕಾರ್ಯಾಚರಣೆ ಮುಗಿದ ನಂತರ ಆಕ್ಸೆಲ್ ಪಾರ್ಥಿವ ಶರೀರವನ್ನು ಕಟ್ಟಡದಿಂದ ಹೊರತೆಗೆಯಲಾಯಿತು ಮತ್ತು ಮರಣೋತ್ತರ ಪರೀಕ್ಷೆಗಾಗಿ 54 ಸಶಸ್ತ್ರ ಪಡೆಗಳ ಪಶುವೈದ್ಯಕೀಯ ಆಸ್ಪತ್ರೆಗೆ ಕಳುಹಿಸಲಾಯಿತು. ವರದಿಗಳ ಪ್ರಕಾರ, ಬುಲೆಟ್ ಪ್ರವೇಶ ಮತ್ತು ನಿರ್ಗಮನದ ಗಾಯಗಳನ್ನು ಹೊರತುಪಡಿಸಿ ಆಕ್ಸೆಲ್‌ ದೇಹದಲ್ಲಿ ಹತ್ತು ಹೆಚ್ಚುವರಿ ಗಾಯಗಳು ಮತ್ತು ಎಲುಬು ಮುರಿತವಾಗಿತ್ತು ಎಂದು ಸೇನಾ ಮೂಲಗಳು ವರದಿ ಮಾಡಿವೆ.

ಆಕ್ಸೆಲ್ ದಕ್ಷ K9 ಅಧಿಕಾರಿಯಾಗಿದ್ದು, ಈ ಹಿಂದೆ ಹಲವಾರು ಯಶಸ್ವಿ ಕಾರ್ಯಾಚರಣೆಗಳ ಭಾಗವಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಆಕ್ಸೆಲ್‌ ನಿಧನದಿಂದ ಇಡೀ ಘಟಕವು ದುಃಖಿತವಾಗಿದೆ .

ಇಂದು ಆಕ್ಸೆಲ್‌ನ ಅಂತಿಮ ಸಂಸ್ಕಾರವನ್ನು ಕಿಲೋ ಫೋರ್ಸ್ ಕಮಾಂಡರ್‌ನಲ್ಲಿ ನಡೆಸಲಾಯಿತು. ಸೇನೆಯ ಅಧಿಕಾರಿಗಳು, ಸಿಬ್ಬಂದಿ ಆಗಲಿದ ಶ್ವಾನಕ್ಕೆ ಪುಷ್ಪ ನಮನ ಸಲ್ಲಿಸಿದರು. ನಂತರ 26 ಎಡಿಯು ಆವರಣದಲ್ಲಿ ಸಮಾಧಿ ಮಾಡಲಾಯಿತು. ಸಾಮಾಜಿಕ ಜಾಲತಾಣದಲ್ಲಿ ಗಣ್ಯರು ಸೇರಿದಂತೆ ಅನೇಕರು ಹುತಾತ್ಮನಾದ ಆಕ್ಸೆಲ್‌ಗೆ ಅಂತಿಮ ನಮನ ಸಲ್ಲಿಸಿದ್ದಾರೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

2 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

2 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

3 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

3 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago