ಶ್ರೀನಗರ: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕೆರ್ನಾಗ್ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಇನ್ನೊಬ್ಬ ಭಯೋತ್ಪಾದಕನನ್ನು ಕೊಲ್ಲಲಾಗಿದ್ದು (ಒಟ್ಟು 02). ಶೋಧ ಮುಂದುವರಿದಿದೆ, ಎಂದು ಪೊಲೀಸರು ಟ್ವೀಟ್ ಮಾಡಿದ್ದಾರೆ.
ಇಬ್ಬರೂ ಭಯೋತ್ಪಾದಕರು ಹಿಜ್ಬುಲ್ ಮುಜಾಹಿದ್ದೀನ್ ಭಯೋತ್ಪಾದಕ ಸಂಘಟನೆಗೆ ಸೇರಿದವರಾಗಿದ್ದರು ಮತ್ತು ಅವರಲ್ಲಿ ಒಬ್ಬರು 2021 ರಲ್ಲಿ ಸರಪಂಚ್ ಗುಲಾಮ್ ರಸೂಲ್ ದಾರ್ ಮತ್ತು ಅವರ ಪತ್ನಿಯನ್ನು ಹತ್ಯೆ ಮಾಡಿದ್ದರು.
ಹತ್ಯೆಗೀಡಾದ ಭಯೋತ್ಪಾದಕರನ್ನು ಎಚ್ಎಂ ಭಯೋತ್ಪಾದಕ ಸಂಘಟನೆಯ ಜುನೈದ್ ಭಟ್ ಮತ್ತು ಬಸಿತ್ ವಾನಿ ಎಂದು ಗುರುತಿಸಲಾಗಿದೆ. ಅನಂತ್ನಾಗ್ನಲ್ಲಿ ಬಿಜೆಪಿಯ ಸರಪಂಚ್ ಜಿ.ಎಚ್.ರಸೂಲ್ ದಾರ್ ಮತ್ತು ಅವರ ಪತ್ನಿ, ಪಂಚ್ ಹತ್ಯೆಯಲ್ಲಿ ಭಯೋತ್ಪಾದಕ ಬಸಿತ್ ವಾನಿ ಭಾಗಿಯಾಗಿದ್ದಾನೆ, ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ವಲಯ ಇನ್ಸ್ಪೆಕ್ಟರ್ ಜನರಲ್ ವಿಜಯ್ ಕುಮಾರ್ ಅವರನ್ನು ಉಲ್ಲೇಖಿಸಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮಾಡಿದ್ದಾರೆ.
ಕಳೆದ ಕೆಲವು ತಿಂಗಳುಗಳಲ್ಲಿ ಕಾಶ್ಮೀರದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸರಣಿ ಎನ್ಕೌಂಟರ್ಗಳು ನಡೆದಿವೆ, ಇದರಲ್ಲಿ ಅನೇಕ ಭಯೋತ್ಪಾದಕರು ಮತ್ತು ಅವರ ಕಮಾಂಡರ್ಗಳನ್ನು ಹತ್ಯೆ ಮಾಡಲಾಗಿದೆ.
ಹೆಚ್ಚಿನ ಕಾರ್ಯಾಚರಣೆಗಳನ್ನು ನಿರ್ದಿಷ್ಟ ಗುಪ್ತಚರ ಮಾಹಿತಿಗಳ ಆಧಾರದ ಮೇಲೆ ಪೊಲೀಸರು ಮತ್ತು ಸೇನೆ ಜಂಟಿಯಾಗಿ ನಡೆಸಿವೆ.
ಗುರುವಾರ, ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಮಿಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ.