ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಗೂಲ್ ಸಂಗಲ್ಡಾನ್ ನಿಂದ ಉಧಂಪುರಕ್ಕೆ ತೆರಳುತ್ತಿದ್ದ ಖಾಸಗಿ ಕಾರು ಇಂದು ಉಧಂಪುರ ಜಿಲ್ಲೆಯ ಚೆನಾನಿ ಪ್ರದೇಶದ ಪ್ರೇಮ್ ಮಂದಿರ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಹನವು ಆಳವಾದ ಪ್ರಪಾತಕ್ಕೆ ಬಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಗೊಂಡವರನ್ನು ಸ್ಥಳದಿಂದ ಸ್ಥಳಾಂತರಿಸಲಾಗಿದೆ ಮತ್ತು ಅವರಲ್ಲಿ ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
ಈ ದುರ್ಘಟನೆಯಲ್ಲಿ ಜಾಮಿಯಾ ಮಸೀದಿಯ ಇಮಾಮ್ ಮುಫ್ತಿ ಅಬ್ದುಲ್ ಹಮೀದ್ ಮತ್ತು ಅವರ ತಂದೆ ಇಸ್ಲಾಮಿಕ್ ವಿದ್ವಾಂಸ ಮುಹಮ್ಮದ್ ಜಮಾಲ್ ದಿನ್ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.