ಶ್ರೀನಗರ: ಅಮರನಾಥ ಯಾತ್ರೆ ಜುಲೈ 1ರಿಂದ ಆರಂಭವಾಗಿದ್ದು, ಮಂಗಳವಾರದವರೆಗೆ 1 ಲಕ್ಷಕ್ಕೂ ಅಧಿಕ ಭಕ್ತರು ಅಮರನಾಥ ಯಾತ್ರೆ ಕೈಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಧಿಕಾರಿಗಳ ಪ್ರಕಾರ, ಕಾಶ್ಮೀರ ಕಣಿವೆಯಲ್ಲಿ ಹವಾಮಾನ ಸುಧಾರಿಸಿದ್ದರಿಂದ ಎರಡು ಬೇಸ್ ಕ್ಯಾಂಪ್ ಗಳಿಂದ ಯಾತ್ರಾರ್ಥಿಗಳಿಗೆ ದೇವಾಲಯದ ಕಡೆಗೆ ಹೋಗಲು ಅವಕಾಶ ನೀಡಿದ ನಂತರ ಸೋಮವಾರ 24,000 ಕ್ಕೂ ಹೆಚ್ಚು ಯಾತ್ರಿಗಳು ‘ದರ್ಶನ’ ಪಡೆದರು.
ಪ್ರತಿಕೂಲ ಹವಾಮಾನದ ಪರಿಣಾಮವಾಗಿ ಜಮ್ಮು-ಶ್ರೀನಗರ ಹೆದ್ದಾರಿಯನ್ನು ಮುಚ್ಚಿದ್ದರಿಂದ ಯಾತ್ರಿಕರ ಸಂಚಾರವನ್ನು ಮೂರು ದಿನಗಳವರೆಗೆ ಸ್ಥಗಿತಗೊಳಿಸಲಾಗಿತ್ತು. ಮಂಗಳವಾರ ಹೆದ್ದಾರಿಯಲ್ಲಿ ಸಂಚಾರ ತಡೆಹಿಡಿಯಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಂಥ್ಯಾಲ್ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ರಸ್ತೆಯ ಒಂದು ಭಾಗ ಕುಸಿದಿದ್ದು, ಹೆದ್ದಾರಿಯನ್ನು ಪುನಃಸ್ಥಾಪಿಸುವ ಪ್ರಯತ್ನಗಳು ನಡೆಯುತ್ತಿವೆ.