ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಉಗ್ರರನ್ನು ಹತ್ಯೆ ಮಾಡುವ ಮೂಲಕ ಭದ್ರತಾ ಪಡೆಗಳು ಉಗ್ರರ ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ ಎಂದು ಅಧಿಕಾರಿಗಳು ಇಂದು (ಅ.30) ತಿಳಿಸಿದ್ದಾರೆ.
ಕೇರನ್ ಸೆಕ್ಟರ್ನ ಜುಮಗುಂಡ್ ಪ್ರದೇಶದಲ್ಲಿ ಒಳನುಸುಳುವಿಕೆ ಪ್ರಯತ್ನವನ್ನು ಭಾನುವಾರ ರಾತ್ರಿ ಭದ್ರತಾ ಪಡೆಗಳು ವಿಫಲಗೊಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು ಬೆಳಗ್ಗೆ ಪ್ರದೇಶದಲ್ಲಿ ಶೋಧ ನಡೆಸಿದಾಗ ಭಯೋತ್ಪಾದಕನ ಮೃತದೇಹ ಪತ್ತೆಯಾಗಿದೆ. ಕಾರ್ಯಚರಣೆ ಮುಂದುವರಿದಿದ್ದು, ಎಷ್ಟು ಜನ ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಇನ್ನು ತಿಳಿದು ಬಂದಿಲ್ಲ. ಹಾಗಾಗಿ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.