ಶ್ರೀನಗರ: ಅಮರನಾಥ ಗುಹೆಯ ಬಳಿ ಜುಲೈ 8ರಂದು ಸಂಭವಿಸಿದ ಪ್ರವಾಹದಲ್ಲಿ ಮೃತಪಟ್ಟವರ ಕುಟುಂಬದವರಿಗೆ 2 ಲಕ್ಷ ರೂ.ಗಳ ಪರಿಹಾರವನ್ನು ಮಂಜೂರು ಮಾಡಿದ್ದಕ್ಕಾಗಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.
ಈ ಘಟನೆಯಲ್ಲಿ ಗಂಭೀರ ಗಾಯಗೊಂಡ ವ್ಯಕ್ತಿಗಳಿಗೆ ತಲಾ 50,000 ರೂ.ಗಳನ್ನು ಪ್ರಧಾನ ಮಂತ್ರಿ ಕಾರ್ಯಾಲಯ ಮಂಜೂರು ಮಾಡಿದೆ.
ಅಮರನಾಥ್ ಗುಹೆಯ ಬಳಿ ಸಂಭವಿಸಿದ ಪ್ರವಾಹ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಗಳ ಪರಿಹಾರವನ್ನು ಮಂಜೂರು ಮಾಡಿದ್ದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಭಾರಿಯಾಗಿದ್ದೇನೆ ಎಂದು ಲೆಫ್ಟಿನೆಂಟ್ ಗವರ್ನರ್ ಹೇಳಿದ್ದಾರೆ.
ಗಂಭೀರವಾಗಿ ಗಾಯಗೊಂಡವರಿಗೆ 50,000 ರೂ.ಗಳ ಆರ್ಥಿಕ ನೆರವನ್ನು ವಿಸ್ತರಿಸಿದ್ದಕ್ಕಾಗಿ ಲೆಫ್ಟಿನೆಂಟ್ ಗವರ್ನರ್ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದರು. ಕೇಂದ್ರಾಡಳಿತ ಪ್ರದೇಶ ಆಡಳಿತವು ಈಗಾಗಲೇ ಮೃತರ ಕುಟುಂಬಗಳಿಗೆ ತಲಾ ೫ ಲಕ್ಷ ರೂ.ಗಳನ್ನು ವಿತರಿಸಿದೆ.