ಶ್ರೀನಗರ: ಬಿಜೆಪಿ ‘ತಿರಂಗಾ ಬೈಕರ್ಸ್ ರ್ಯಾಲಿ ‘ಗೆ ಪಕ್ಷದ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರು ಐತಿಹಾಸಿಕ ನಗರ ಕೇಂದ್ರ ಲಾಲ್ ಚೌಕ್ ನಿಂದ ಸೋಮವಾರ ಹಸಿರು ನಿಶಾನೆ ತೋರಿದರು.
ಬೈಕ್ ಸವಾರರ ರ್ಯಾಲಿ ಜುಲೈ ೨೬ ರಂದು ವಿಜಯ್ ದಿವಸ್ ರಂದು ಕಾರ್ಗಿಲ್ ಯುದ್ಧ ಸ್ಮಾರಕದಲ್ಲಿ ಕೊನೆಗೊಳ್ಳಲಿದೆ. ಕಾರ್ಗಿಲ್ ಯುದ್ಧದಲ್ಲಿ ಭಾರತದ ವಿಜಯವನ್ನು ಸ್ಮರಿಸಲು ಮತ್ತು ದೇಶದ ಸೇವೆಗಾಗಿ ತಮ್ಮ ಪ್ರಾಣವನ್ನು ಅರ್ಪಿಸಿದ ವೀರರನ್ನು ಸ್ಮರಿಸಲು ಪ್ರತಿ ವರ್ಷ ಈ ದಿನವನ್ನು ಆಚರಿಸಲಾಗುತ್ತದೆ.
ಭದ್ರತಾ ಕಾರಣಗಳಿಗಾಗಿ ಅಧಿಕಾರಿಗಳು ನಗರ ಕೇಂದ್ರಕ್ಕೆ ಹೋಗುವ ಎಲ್ಲಾ ರಸ್ತೆಗಳನ್ನು ಮುಚ್ಚಿದ ನಂತರ ಲಾಲ್ ಚೌಕ್ನ ಘಂಟಾ ಘರ್ನಿಂದ ರ್ಯಾಲಿ ಗೆ ಹಸಿರು ನಿಶಾನೆ ತೋರಿಸಲಾಯಿತು. ಲಾಲ್ ಚೌಕ್ ಪ್ರದೇಶದಲ್ಲಿ ಇಂದು ಅಂಗಡಿ ಮುಂಗಟ್ಟುಗಳು ಸಹ ಮುಚ್ಚಲ್ಪಟ್ಟಿವೆ.
“70 ವರ್ಷಗಳ ಕಾಲ ಆಳಿದ ಅಬ್ದುಲ್ಲಾ ಮತ್ತು ಮುಫ್ತಿ ಎಂಬ ಎರಡು ಕುಟುಂಬಗಳು ಶ್ರೀನಗರವನ್ನು ಭಯೋತ್ಪಾದಕ ರಾಜಧಾನಿಯನ್ನಾಗಿ ಮಾಡಿದ್ದವು, ಆದರೆ ಪ್ರಧಾನಿ ನರೇಂದ್ರ ಮೋದಿ ಅದನ್ನು ಪ್ರವಾಸೋದ್ಯಮ ಮತ್ತು ಪ್ರಗತಿಯ ರಾಜಧಾನಿಯನ್ನಾಗಿ ಮಾಡಿದ್ದಾರೆ” ಎಂದು ತರುಣ್ ಚುಗ್ ಸಭಿಕರನ್ನುದ್ದೇಶಿಸಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಪ್ರಗತಿಗಾಗಿ ಯುವಕರು ಮುಂದೆ ಬಂದಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ವಿವಿಧ ಭಾಗಗಳಿಂದ ಯುವಕರು ಸಹ ಬೈಕ್ ಸವಾರರ ರ್ಯಾಲಿ ಯಲ್ಲಿ ಭಾಗವಹಿಸಿದ್ದರು.
ತ್ರಿವರ್ಣ ಧ್ವಜವು ಪ್ರತಿಯೊಬ್ಬ ಕಾಶ್ಮೀರಿಯ ಹೃದಯ ಮತ್ತು ಮನಸ್ಸಿನಲ್ಲಿದೆ, ಆದರೆ ಈ ರಾಜಕಾರಣಿಗಳು ಈ ಸಂಗತಿಯನ್ನು ಒಪ್ಪಿಕೊಳ್ಳಲು ಹಿಂಜರಿಯುತ್ತಾರೆ.
ಕಾರ್ಗಿಲ್ ಯುದ್ಧದ ಸಮಯದಲ್ಲಿ ಮಾಡಿದ ತ್ಯಾಗವನ್ನು ಸ್ಮರಿಸಲು ಇಂದಿನ ರ್ಯಾಲಿಯನ್ನು ಆಯೋಜಿಸಲಾಗುತ್ತಿದೆ. ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಕೂಡ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದರು.