ಶ್ರೀನಗರ: ಕಾಶ್ಮೀರದ ಪೂಂಚ್ನಲ್ಲಿ ಭಾರತೀಯ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ದಾಳಿ ನಡೆಸಿದ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆ ಗಿಳಿದ ಸೇನೆ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ವರದಿಯಾಗಿದೆ.
ಭದ್ರತಾ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಸೇನೆಯು ಹೆಲಿಕಾಪ್ಟರ್ ಬಳಸಿ ದಾಳಿ ನಡೆದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವೈಮಾನಿಕ ಕಣ್ಗಾವಲು ಕೂಡ ನಡೆಸಿದೆ.
ಸ್ಥಳಕ್ಕೆ ಸೇನೆಯ ಅಧಿಕಾರಿಗಳು, ಗುಪ್ತಚರ ಸಂಸ್ಥೆ ಅಧಿಕಾರಿಗಳು ಹಾಗೂ ಜಮ್ಮುವಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಹಸಿತಾರ್ ಬಳಿ ಶನಿವಾರ ಸಂಜೆ ನಡೆದ ದಾಳಿಯಲ್ಲಿ ಐವರು ಐಎಎಫ್ ಸಿಬ್ಬಂದಿ ಗಾಯಗೊಂಡು, ಒಬ್ಬರು ಮೃತಪಟ್ಟಿದ್ದರು. ದಾಳಿ ನಡೆದ ಬಳಿಕ ಉಗ್ರರು ಸಮೀಪದ ಅರಣ್ಯಕ್ಕೆ ಪರಾರಿಯಾಗಿದ್ದರು. ದಾಳಿಗೆ ಉಗ್ರರು ಎಕೆ ಅಸಾಲ್ಟ್ ರೈಫಲ್, ಅಮೆರಿಕ ನಿರ್ಮಿತ ಎಂ4 ಕಾರ್ಬೈನ್ ಮತ್ತು ಸ್ಟೀಲ್ ಬುಲೆಟ್ಗಳನ್ನು ಬಳಸಿದ್ದಾರೆ. ಉಗ್ರರಿಗಾಗಿ ಸೇನೆ ಶೋಧ ಕಾರ್ಯ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2003 ಮತ್ತು 2021ರ ನಡುವೆ ಈ ಭಾಗದಲ್ಲಿ ಯಾವುದೇ ಭಯೋತ್ಪಾದನಾ ದಾಳಿಗಳಿಲ್ಲದೆ ಶಾಂತಿ ನೆಲೆಸಿತ್ತು. ಕಳೆದ ವರ್ಷ ಇದೇ ಭಾಗದಲ್ಲಿ ಪ್ರಮುಖ ಭಯೋತ್ಪಾದಕ ದಾಳಿ ನಡೆದಿತ್ತು.
ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ ಅಮಾನತು…
ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್ ಕೊಲೆ ಆರೋಪಿಗೆ ಎನ್ಕೌಂಟರ್ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.
ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…
ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…
ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…
ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…