ಶ್ರೀನಗರ: ಜಮ್ಮು ಕಾಶ್ಮೀರದ ಪೂಂಛ್ ಪ್ರದೇಶದಲ್ಲಿ ಸಿಎಒ ಸೇನಾ ವಾಹನದ ಮೇಲೆ ಉಗ್ರಗಾಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಸೈನಿಕರು ಸಹ ಪ್ರತಿದಾಳಿ ನಡೆಸಿದ್ದಾರೆ.
ಪೂಂಛ್ ನ ಕೃಷ್ಣ ಘಾಟಿ ಪ್ರದೇಶದ ಬಳಿ ಇರುವ ಬೆಟ್ಟದ ಮೇಲಿಂದ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ. ಇದರ ಪ್ರತಿಯಾಗಿ ಸೈನಿಕರು ಸಹ ಪ್ರತಿದಾಳಿ ನಡೆಸಿದ್ದಾರೆ ಎಂದು ಸೇನೆ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದೆ.
ಇನ್ನು ಎಂದಿನಂತೆ ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಉಗ್ರರನ್ನು ಸದೆ ಬಡಿಯಲು ಪ್ರದೇಶವನ್ನು ಸುತ್ತುವರಿದು, ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಸದ್ಯ ಘಟನೆಯಲ್ಲಿ ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.