ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ನಡೆದ ಉದ್ದೇಶಿತ ದಾಳಿಯಲ್ಲಿ ಭಯೋತ್ಪಾದಕರು ಬಿಹಾರದ ವಲಸೆ ಕಾರ್ಮಿಕನನ್ನು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಕಾಶ್ಮೀರ ವಲಯ ಪೊಲೀಸರು, ರಾಜು ಷಾ ಎಂದು ಗುರುತಿಸಲಾದ ಕಾರ್ಮಿಕನನ್ನು ಆಸ್ಪತ್ರೆಗೆ ಸಾಗಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಬುಧವಾರ ಮುಂಜಾನೆ ಇಬ್ಬರು ಶಂಕಿತ ಭಯೋತ್ಪಾದಕರನ್ನು ಬಿಜ್ಬೆಹರಾದಿಂದ ಬಂಧಿಸಲಾಯಿತು. ಅವರಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಯಿತು.
ಕಳೆದ ಸೋಮವಾರ ದಕ್ಷಿಣ ಕಾಶ್ಮೀರದ ಹೆರ್ಪೋರಾದಲ್ಲಿ ಡೆಹ್ರಾಡೂನ್ ನಿವಾಸಿಯೊಬ್ಬ ಭಯೋತ್ಪಾದಕರ ಗುಂಡಿಗೆ ಬಲಿಯಾಗಿದ್ದರು. ಅದಾದ ಒಂದು ವಾರದಲ್ಲೇ ಮತ್ತೊಂದು ದಾಳಿ ನಡೆದಿದೆ.
ಆ ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.