ಕಾಶ್ಮೀರದಲ್ಲಿ ಭೀಕರ ಅಪಘಾತ: ಟ್ರಾಫಿಕ್ ಪೊಲೀಸ್ ಸೇರಿ ಮೂವರ ದುರ್ಮರಣ

ಶ್ರೀನಗರ: ಮೂರು ವಾಹನಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಟ್ರಾಫಿಕ್ ಪೊಲೀಸ್ ಸೇರಿದಂತೆ ಮೂವರು ಮೃತಪಟ್ಟಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ಜಿಲ್ಲೆಯಲ್ಲಿ ನಡೆದಿದೆ.

ಶ್ರೀನಗರ ನಗರದ ಹೊರವಲಯದಲ್ಲಿರುವ ಮಲೂರಾ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದ್ದು, ಈ ಪ್ರದೇಶದ ಪೆಟ್ರೋಲ್ ಪಂಪ್ ಬಳಿ ವಾಹನಗಳು ಪರಸ್ಪರ ಡಿಕ್ಕಿ ಹೊಡೆದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

“ಅಲ್ಲಿನ ಪೆಟ್ರೋಲ್ ಪಂಪ್ ಬಳಿಯ ಮಾಲೂರಾ ಪ್ರದೇಶದಲ್ಲಿ ಟ್ರಕ್, ತ್ರಿಚಕ್ರ ವಾಹನ ಮತ್ತು ಕಾರು ಪರಸ್ಪರ ಡಿಕ್ಕಿ ಹೊಡೆದಿವೆ. ಈ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.  ಮೃತಪಟ್ಟ ಟ್ರಾಫಿಕ್ ಪೊಲೀಸ್ ಅನ್ನು ಬಾರಾಮುಲ್ಲಾ ಜಿಲ್ಲೆಯ ಪಟ್ಟಾನ್ ತಹಸಿಲ್ಗೆ ಸೇರಿದ ಜಹೂರ್ ಅಶ್ರಫ್ ಎಂದು ಗುರುತಿಸಲಾಗಿದೆ.

ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Ashika S

Recent Posts

ಬಸ್‌,ಲಾರಿ ನಡುವೆ ಭೀಕರ ಅಪಘಾತ : ಹೊತ್ತಿ ಉರಿದ ವಾಹನ, 6 ಮಂದಿ ಸಾವು

ಬಸ್‌ ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದು ಬೆಂಕಿ ಕಾಣಿಸಿಕೊಂಡ ಪರಿಣಾಮ 6 ಮಂದಿ ಸಜೀವ ದಹನಹೊಂದಿರುವ ಘಟನೆ ಘಟನೆ…

11 mins ago

ʼನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಬಂಡಾಯ, ಪಕ್ಷೇತರ ಸ್ಫರ್ಧೆ ಅಲ್ಲ ಶಿಕ್ಷಕ ಪ್ರತಿನಿಧಿಯಾಗಿ ಸ್ಫರ್ಧೆʼ

ನೈಋತ್ಯ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರದಲ್ಲಿ ನಡೆಯುವ ಚುನಾವಣೆಗೆ ಈ ಬಾರಿ ಕರಾವಳಿ ಜಿಲ್ಲೆೆಯನ್ನು ಕಡೆಗಣಿಸಲಾಗಿದೆ. ಯಾವುದೇ ರಾಷ್ಟ್ರೀಯ ಪಕ್ಷಗಳು…

15 mins ago

ತರಕಾರಿ, ಬೇಳೆ ಕಾಳು, ಹಣ್ಣು, ಮಾಂಸ ದರ ಭಾರೀ ಏರಿಕೆ

ತಾಪಮಾನ ಏರಿಕೆ, ನೀರಿನ ಕೊರತೆ ಮೊದಲಾದ ಕಾರಣಗಳಿಂದ ತರಕಾರಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಬಡ, ಮಧ್ಯಮ ವರ್ಗದವರು…

49 mins ago

ತಾಮ್ರದ ಗಣಿಯೊಳಗೆ ಸಿಲುಕಿದ್ದ 14 ಅಧಿಕಾರಿಗಳ ರಕ್ಷಣೆ

ಕೋಲಿಹಾನ್‌ನ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ ಗಣಿಯಲ್ಲಿ ಲಿಫ್ಟ್ ಹಗ್ಗ ಮುರಿದು ಗಣಿಯೊಳಗೆ ಸಿಲುಕಿಗೊಂಡಿದ್ದ 14 ಜನರನ್ನು ರಕ್ಷಿಸಲಾಗಿದೆ. ಮಂಗಳವಾರ ತಡರಾತ್ರಿ…

53 mins ago

ಬೆಳ್ಳಂಬೆಳಗ್ಗೆ ಹರಿದ ನೆತ್ತರು : ಪಾಗಲ್‌ ಪ್ರೇಮಿಯಿಂದ ಯುವತಿಯ ಹತ್ಯೆ

ಬೆಳ್ಳಂಬೆಳಗ್ಗೆ ಮನೆಯಲ್ಲಿ ಮಲಗಿದ್ದ ಯುವತಿಗೆ ಚಾಕು ಇರಿದು ಕೊಲೆ ಮಾಡಿ ಎಸ್ಕೇಪ್‌ ಆಗಿರುವ ಘಟನೆ ನಡೆದಿದೆ.

1 hour ago

ತಾಮ್ರದ ಗಣಿ ಪರಿಶೀಲನೆಗೆ 1,800 ಅಡಿ ಆಳಕ್ಕೆ ಹೋದ 14 ಮಂದಿ ಟ್ರ್ಯಾಪ್

 ರಾಜಸ್ಥಾನದ ಜುಂಜುನುದಲ್ಲಿರುವ ಹಿಂದೂಸ್ತಾನ್ ಕಾಪರ್ ಲಿಮಿಟೆಡ್‌ನ ಕೋಲಿಹಾನ್ ಗಣಿಯಲ್ಲಿ ಮಂಗಳವಾರ ರಾತ್ರಿ ಲಿಫ್ಟ್​ ಚೈನ್ ತುಂಡಾಗಿ ಗಣಿ ತಪಾಸಣೆಗೆಂದು ಹೋದ…

2 hours ago