ಜಾರ್ಖಂಡ್ನ ತ್ರಿಕೂಟ ಪರ್ವತದಲ್ಲಿರುವ ರೋಪ್ವೇನಲ್ಲಿ ಅಪಘಾತ ಸಂಭವಿಸಿದೆ. ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ನೆಲೆಯೂರಿರುವ ತ್ರಿಕೂಟ ಪರ್ವತದಲ್ಲಿ ರೋಪ್ ವೇನ ತುಂಡಾಗಿ ಕೇಬಲ್ ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿವೆ.
ಪರಿಣಾಮ ಮೂವರು ಯಾತ್ರಿಕರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಐವತ್ತು ಪ್ರಯಾಣಿಕರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ತಾಂತ್ರಿಕ ಕಾರಣಗಳಿಂದ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮತ್ತಷ್ಟು ಕೇಬಲ್ ಕಾರುಗಳಲ್ಲಿ ಸಿಲುಕಿರುವವರ ರಕ್ಷಣೆಗೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಸಂಸ್ಥೆ ನೆರವಿಗೆ ಮುಂದಾಗಿದೆ.
M17 ಹೆಲಿಕಾಪ್ಟರ್ಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಯಾತ್ರಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಪ್ರಯತ್ನಿಸಲಾಗುತ್ತಿದೆ.