ರಾಂಚಿ: ಯುವ ಕುಸ್ತಿಪಟುವಿನ ಕಪಾಳಕ್ಕೆ ಹೊಡೆದ ಬಿಜೆಪಿ ಸಂಸದ

ರಾಂಚಿ: ಜಾರ್ಖಂಡ್ ರಾಜಧಾನಿ ರಾಂಚಿಯಲ್ಲಿ ನಡೆಯುತ್ತಿರುವ ಕುಸ್ತಿ ರಾಷ್ಟ್ರೀಯ ಚಾಂಪಿಯನ್‌ಷಿಪ್ ಪಂದ್ಯಾವಳಿಯಲ್ಲಿ ಬಿಜೆಪಿ ಸಂಸದರೊಬ್ಬರು ಯುವ ಕುಸ್ತಿಪಟುವಿನ ಕಪಾಳಕ್ಕೆ ಹೊಡೆದಿರುವ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ.

ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಅಧ್ಯಕ್ಷರೂ ಆಗಿರುವ ಸಂಸದ ಬ್ರಿಜ್‌ ಭೂಷಣ್ ಶರಣ್ ಸಿಂಗ್ ಅವರು, ವೇದಿಕೆಯಿಂದ ಕೆಳಗಿಳಿಯುವ ಮುನ್ನ ಎರಡು ಬಾರಿ ಯುವ ಕುಸ್ತಿಪಟುವಿನ ಕಪಾಳಕ್ಕೆ ಹೊಡೆದಿರುವ ದೃಶ್ಯ ವಿಡಿಯೊದಲ್ಲಿದೆ.

ಉತ್ತರ ಪ್ರದೇಶದ ಕೈಸರ್ ಗಂಜ್ ಕ್ಷೇತ್ರವನ್ನು ಪ್ರತಿನಿಧಿಸುವ ಸಿಂಗ್, ರಾಂಚಿಯ ಶಾಹೀದ್ ಗಣಪತ್ ರಾಯ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 15 ವರ್ಷದೊಳಗಿನವರ ರಾಷ್ಟ್ರೀಯ ಕುಸ್ತಿ ಚಾಂಪಿಯನ್‌ಷಿಪ್‌ನ ಮೊದಲ ದಿನದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.

ಕುಸ್ತಿಪಟು ಒಬ್ಬರ ವಯಸ್ಸು 15 ವರ್ಷ ಮೇಲ್ಪಟ್ಟಿದ್ದರಿಂದ ಕ್ರೀಡಾಕೂಟದಲ್ಲಿ ಭಾಗವಹಿಸಲು ಅವಕಾಶ ನೀಡಿರಲಿಲ್ಲ. ಆದರೂ ಆತ ತನಗೆ ಭಾಗವಹಿಸಲು ಅವಕಾಶ ನೀಡುವಂತೆ ಸಂಸದರಿಗೆ ದುಂಬಾಲು ಬಿದ್ದಿದ್ದನು. ಈ ಸಂದರ್ಭ, ತಾಳ್ಮೆ ಕಳೆದುಕೊಂಡ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರು, ಕುಸ್ತಿಪಟುವಿನ ಕಪಾಳಕ್ಕೆ ಬಾರಿಸಿದ್ಧಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಸಂಸದರು, ಯುವ ಕುಸ್ತಿಪಟುವಿಗೆ ಹೊಡೆದಿರುವ ವಿಡಿಯೊವನ್ನು ಹಲವರು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

6 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

6 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

7 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

8 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

8 hours ago