News Karnataka Kannada
Sunday, April 28 2024
ಝಾರ್ಖಂಡ್

ಜಾರ್ಖಂಡ್: ಬಹುಮಹಡಿ ಕಟ್ಟಡದಲ್ಲಿ ಭಾರಿ ಅಗ್ನಿ ಅವಘಡ, 14 ಮಂದಿ ಸಾವು

14 killed in massive fire at multi-storey building in Dhanbad
Photo Credit : IANS

ರಾಂಚಿ: ಜಾರ್ಖಂಡ್​ನ ಧನಾಬಾದ್​ನಲ್ಲಿ ಜ. 31ರಂದು ರಾತ್ರಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಈ ಘಟನೆ ಬಗ್ಗೆ ನಿಖರವಾದ ಕಾರಣ ತಿಳಿದುಬರಬೇಕಿದೆ ಎಂದು ಜಾರ್ಖಂಡ್​ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಖದೇವ್​ ಸಿಂಗ್​ ಅವರು ತಿಳಿಸಿದ್ದಾರೆ.

14 ಮಂದಿ ಮೃತರಲ್ಲಿ 10 ಮಂದಿ ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ತಿಳಿದುಬಂದಿದೆ.

ಈ ಘಟನೆ ಬಗ್ಗೆ ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಧನಾಬಾದ್​ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅನೇಕರು ಪ್ರಾಣ ಕಳೆದುಕೊಂಡಿರುವುದು ಅತೀವ ದುಃಖ ಉಂಟು ಮಾಡಿದೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಿರುವ ಪ್ರಧಾನಿ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು