ರಾಂಚಿ: ಜಾರ್ಖಂಡ್ನ ಧನಾಬಾದ್ನಲ್ಲಿ ಜ. 31ರಂದು ರಾತ್ರಿ ಬಹುಮಹಡಿ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 14 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಬಗ್ಗೆ ನಿಖರವಾದ ಕಾರಣ ತಿಳಿದುಬರಬೇಕಿದೆ ಎಂದು ಜಾರ್ಖಂಡ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಖದೇವ್ ಸಿಂಗ್ ಅವರು ತಿಳಿಸಿದ್ದಾರೆ.
14 ಮಂದಿ ಮೃತರಲ್ಲಿ 10 ಮಂದಿ ಮಹಿಳೆಯರು ಮತ್ತು ಮೂವರು ಮಕ್ಕಳು ಎಂದು ತಿಳಿದುಬಂದಿದೆ.
ಈ ಘಟನೆ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಧನಾಬಾದ್ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಅನೇಕರು ಪ್ರಾಣ ಕಳೆದುಕೊಂಡಿರುವುದು ಅತೀವ ದುಃಖ ಉಂಟು ಮಾಡಿದೆ ಎಂದಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಸಾಂತ್ವಾನ ಹೇಳಿರುವ ಪ್ರಧಾನಿ, ಗಾಯಗೊಂಡವರ ಶೀಘ್ರ ಚೇತರಿಕೆಗೆ ಪ್ರಾರ್ಥಿಸಿದ್ದಾರೆ.