ರಾಂಚಿ: ಭೂ ಹಗರಣದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ಅವರಿಗೆ ಜಾರಿ ನಿರ್ದೇಶನಾಲಯ 10ನೇ ಸಮನ್ಸ್ ಜಾರಿ ಮಾಡಿದೆ.
ಜನವರಿ 29 ಮತ್ತು 31ರ ನಡುವೆ ಯಾವಾಗ ವಿಚಾರಣೆ ನಡೆಸಬೇಕು ಎಂದು ನಿರ್ಧರಿಸುವಂತೆ ಇಡಿ ಮುಖ್ಯಮಂತ್ರಿಗೆ ಕಳುಹಿಸಿದ ಪತ್ರದಲಿ ತಿಳಿಸಿದೆ. ಈ ಹಿಂದಿನಂತೆ ಹೇಳಿಕೆ ದಾಖಲಿಸಿಕೊಳ್ಳಲು ಬರದಿದ್ದರೆ ಇಡಿ ಅಧಿಕಾರಿಗಳೇ ನಿಮ್ಮ ಮುಂದೆ ಬರುವುದಾಗಿ ಎಚ್ಚರಿಕೆಯನ್ನೂ ನೀಡಲಾಗಿದೆ.
ಇದಕ್ಕೂ ಮುನ್ನ ಜನವರಿ 25ರಂದು ಇಡಿ ವಿಚಾರಣೆಗೆ ಕಾಲಾವಕಾಶ ನೀಡಲು ಸಿಎಂ ಪರೋಕ್ಷವಾಗಿ ನಿರಾಕರಿಸಿದ್ದರು. ಅಲ್ಲದೆ ಇಡಿಗೆ ಕಳುಹಿಸಿರುವ ಪತ್ರದಲ್ಲಿ ಕಾಲಾವಕಾಶ ನೀಡುವ ಬಗ್ಗೆ ಸಿಎಂ ಉಲ್ಲೇಖಿಸಿಲ್ಲ. ಸೂಕ್ತ ಸಮಯದಲ್ಲಿ ಉತ್ತರ ನೀಡುವುದಾಗಿ ಹೇಳಲಾಗಿತ್ತು .