ದೇವಘರ್: ಕಾರೊಂದು ಸೇತುವೆಯಿಂದ ಕೆಳಕ್ಕೆ ಬಿದ್ದು ಒಂದೇ ಕುಟುಂಬದ ಐವರು ಮೃತಪಟ್ಟ ಘಟನೆ ಜಾರ್ಖಂಡ್ ನ ದೇವಘರ್ ಜಿಲ್ಲೆಯಲ್ಲಿ ನಡೆದಿದೆ.
ಕಾರಿನ ಚಾಲಕ ಮಾತ್ರ ಬದುಕುಳಿದಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮುಖೇಶ್ ರೈ ( 30) ಲವ್ಲಿ ಕುಮಾರಿ ( 27) ರೋಶನ್ ಚೌದರಿ (23) ಒಂದೂ ವರೆ ವರ್ಷದ ಬಾಲಕ ಎಂದು ಗುರುತಿಸಿಲಾಗಿದೆ.
ಕಾರಿನಲ್ಲಿದ್ದ ವ್ಯಕ್ತಿಯೊಬ್ಬರು ಡ್ರೈವ್ ಮಾಡುತ್ತಿದ್ದ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು ನಿಯಂತ್ರಣ ತಪ್ಪಿದ ಕಾರು ಸೇತುವೆಯಿಂದ ಕೆಳಕ್ಕೆ ಬಿದ್ದಿದೆ ಎನ್ನಲಾಗಿದೆ.