ರಾಂಚಿ: ಇನ್ನು ಮುಂದೆ ಜಾರ್ಖಂಡ್ನಲ್ಲಿ 50 ವರ್ಷ ಪೂರ್ಣಗೊಂಡ ಆದಿವಾಸಿ ಹಾಗೂ ದಲಿತ ಸಮುದಾಯದ ವ್ಯಕ್ತಿಗಳು ಪಿಂಚಣಿ ಸೌಲಭ್ಯವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಘೋಷಣೆ ಮಾಡಿದ್ದಾರೆ.
ಅವರು ಇಂದು ರಾಜ್ಯದಲ್ಲಿ ಜೆಎಂಎಂ (ಜಾರ್ಖಂಡ್ ಮುಕ್ತಿ ಮೋರ್ಚಾ) ಸರ್ಕಾರ ನಾಲ್ಕು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರಾಂಚಿಯ ಮೊರಾಬಾಡಿ ಮೈದಾನದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿ, ಈ ಹೊಸ ಪಿಂಚಣಿ ಸೌಲಭ್ಯದ ಬಗ್ಗೆ ತಿಳಿಸಿದರು. ಈ ಸಮುದಾಯಗಳಲ್ಲಿ ಮರಣ ಪ್ರಮಾಣ ಅಧಿಕವಾಗಿದ್ದು, 60 ವರ್ಷಗಳ ನಂತರ ಉದ್ಯೋಗಗಳು ಸಿಗುವುದಿಲ್ಲ ಎಂದರು.
ಜೆಎಂಎಂ ನಾಲ್ಕು ವರ್ಷಗಳಲ್ಲಿ 60 ವರ್ಷ ಮೇಲ್ಪಟ್ಟ 36 ಲಕ್ಷ ಜನರಿಗೆ, 18 ವರ್ಷ ಮೇಲ್ಪಟ್ಟ ವಿಧವೆಯರಿಗೆ ಮತ್ತು ದೈಹಿಕ ವಿಕಲಚೇತನರಿಗೆ ಪಿಂಚಣಿ ಸೌಲಭ್ಯಗಳನ್ನು ನೀಡಿದೆ ಎಂದರು.